News Kannada
Monday, September 25 2023
ಮಂಗಳೂರು

ಗ್ಯಾರಂಟಿ ಜಾರಿಯಾಗದೇ ಇದ್ರೆ ಬಿಜೆಪಿ ಹೋರಾಟ ನಡೆಸಲಿದೆ: ನಳಿನ್‌ ಕುಮಾರ್‌ ಕಟೀಲ್‌

BJP will fight if guarantee is not implemented: Nalin Kumar Kateel
Photo Credit : Facebook

ಮಂಗಳೂರು: ಕಾಂಗ್ರೆಸ್‌ ಅಡ್ಡ ದಾರಿಯಲ್ಲಿ ಅಧಿಕಾರ ಹಿಡಿದಿದ್ದು, ಜನರನ್ನು ಮೂರ್ಖರನ್ನಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಗ್ಯಾರಂಟಿ ಘೋಷಿಸಿತ್ತು. ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕ, ಸೋನಿಯಾ, ಸಿದ್ದರಾಮಯ್ಯ, ಡಿಕೆಶಿ ಘೋಷಣೆ ಮಾಡಿದ್ದರು. ಗ್ಯಾರಂಟಿ ಕಾರ್ಡ್ ಹಿಡಿದು ರಾಜ್ಯದ ಎಲ್ಲಾ ಜನರಿಗೂ ಕೊಡ್ತೇವೆ ಅಂದಿದ್ದರು. ಎಲ್ಲರಿಗೂ 24 ಗಂಟೆಯೊಳಗೆ ಗ್ಯಾರಂಟಿ ಯೋಜನೆ ನೀಡುವುದಾಗಿ ಹೇಳಿದ್ದರು. ಆದರೆ 20 ದಿನ ಕಳೆದರೂ ಯೋಜನೆ ಘೋಷಿಸಿಲ್ಲ.

ಮೀಟಿಂಗ್‌ ಮೇಲೆ ಮೀಟಿಂಗ್‌ ಮಾಡುತ್ತಿದ್ದರೂ ಯೋಜನೆ ಜಾರಿಯಾಗಿಲ್ಲ. ಹಣಕಾಸು ಇಲಾಖೆ ಈ ಯೋಜನೆ ಜಾರಿ ಸಾಧ್ಯವಿಲ್ಲ ಎಂದಿದೆ. ಇನ್ನೊಂದೆಡೆ ಜನ ಕರೆಂಟ್‌ ಬಿಲ್ಲ ಕಟ್ಟುತ್ತಿಲ್ಲ. ಬಸ್‌ಗಳಲ್ಲಿ ಟಿಕೆಟ್‌ಗೆ ಹಣ ನೀಡುತ್ತಿಲ್ಲ. ಹಣಕಾಸು ಸಚಿವ, ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಸತ್ಯಾಂಶ ಗೊತ್ತಿದ್ದರೂ ಸುಳ್ಳು ಹೇಳಿದ್ದಾರೆ. ಈಗ ಹಾದಿ ತಪ್ಪಿಸಲು ಮೋದಿ 15 ಲಕ್ಷ ಕೊಡ್ತೀನಿ ಅಂತ ಹೇಳಿದ್ದರು ಅಂತ ಹೇಳುತ್ತಿದ್ದಾರೆ.

ಆದರೆ ಮೋದಿ ಎಲ್ಲಿಯೂ 15 ಲಕ್ಷ ರೂ. ಕೊಡುವ ಗ್ಯಾರಂಟಿ ಕಾರ್ಡ್ ಕೊಟ್ಟಿರಲಿಲ್ಲ. ಅವರು ಕಪ್ಪು ಹಣ ತಂದರೆ ಕೊಡುತ್ತೇವೆ ಎಂದು ಹೇಳಿದ್ದಾರೆ. ನಾವು ಜನರ ಪರ ಇದ್ದೇವೆ, ಗ್ಯಾರಂಟಿ ಜಾರಿಯಾಗದೇ ಇದ್ರೆ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್‌ ನವರಿಂದ ಬೀದಿಯಲ್ಲಿ ನೌಕರರು ಏಟು ತಿನ್ನುವ ಹಾಗೆ ಆಗಿದೆ ಎಂದರು.

See also  ಮಂಗಳೂರು: ಹೈಪ್ರೊಫೈಲ್ ಗಾಂಜಾ ಕೇಸ್‌ , ಬಂಧಿತರ ಸಂಖ್ಯೆ 24 ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು