News Karnataka Kannada
Friday, March 29 2024
Cricket
ಮಂಗಳೂರು

ಬಿಜೆಪಿಯಿಂದ ಭ್ರಷ್ಟಾಚಾರದ ಭಯೋತ್ಪಾದನೆ, ಪ್ರಿಯಾಂಕಾ ವಾಗ್ದಾಳಿ

Photo Credit : News Kannada

ಮೂಲ್ಕಿ: ಬಿಜೆಪಿ ಭ್ರಷ್ಟಾಚಾರದ ಭಯೋತ್ಪಾದನೆ ನಡೆಸುತ್ತಿದೆ. ಇದಕ್ಕಾಗಿಯೇ ಧರ್ಮದ ವಿಚಾರವನ್ನು ಎಳೆತಂದು ಜನರ, ನಡುವೆ ಕಂದಕ ಸೃಷ್ಟಿಸಿ ಮತಗಳಿಸುವ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.

ಮೂಲ್ಕಿ ಕೊಲ್ನಾಡಿನಲ್ಲಿ ಮಂಗಳೂರು ಉತ್ತರ ಮತ್ತು ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕದ ಕರಾವಳಿ ಧರ್ಮದ ಊರು, ಇಲ್ಲಿನ ಮಣ್ಣಿನಲ್ಲಿ ನ್ಯಾಯ, ನಿಷ್ಠೆಗೆ ಮಹತ್ವದ ಸ್ಥಾನವಿದೆ. ಅದೇರೀತಿ ಇಲ್ಲಿನ ರೈತರು, ಮೀನುಗಾರರು, ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಬಿಜೆಪಿ ಧರ್ಮ, ಧರ್ಮಗಳ ನಡುವೆ ಅಂತರ ಸೃಷ್ಟಿಸುವ ಆತಂಕಕಾರಿ ಕಾರ್ಯ ಮಾಡುತ್ತಿದೆ. 2 ದಿನಗಳ ಮೊದಲು ದೇಶದ ಪ್ರಧಾನಿ ಇದೇ ವೇದಿಕೆಯಲ್ಲಿ ಆತಂಕವಾದ ಕುರಿತು ಮಾತನಾಡಿದ್ದರು. ಆದರೆ ನಿಜವಾದ ಆತಂಕದ ವಿಷಯವೆಂದರೆ ಜನರಿಗೆ ಅಗತ್ಯವಾದ ಗ್ಯಾಸ್‌ ಸಿಲಿಂಡರ್‌ , ದಿನಸಿ ಬೆಲೆ ಏರಿಕೆಯಾಗಿರುವುದು. ಬಿಜೆಪಿ ಆಡಳಿತದಲ್ಲಿ ಜನರು ಜೀವನ ನಡೆಸುವುದೇ ದುಸ್ತರವಾಗಿದೆ. ಪ್ರತಿದಿನವೂ ಭವಿಷ್ಯದ ಚಿಂತೆಯಲ್ಲಿ ಆತಂಕದಿಂದ ದಿನದೂಡುವಂತಾಗಿದೆ. ಕರ್ನಾಟದ5 ಲಕ್ಷ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡತನದಿಂದ 3000 ಸಾವಿರ ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಧಿಕಾರದಲ್ಲಿರುವ 40 ಪರ್ಸೆಂಟ್‌ ಸರ್ಕಾರದಿಂದ ನೈಜ ಆತಂಕವಾದ ಸೃಷ್ಟಿಯಾಗಿದೆ. ಶಿಕ್ಷಣ ಪಡೆದವರಿಗೆ ಉದ್ಯೋಗದ ಆತಂಕವಿದೆ. ಬಿಜೆಪಿ ಸರ್ಕಾರ ಪ್ರತಿ ವಿಚಾರಕ್ಕೂ ಕಮಿಷನ್‌ ನಿಗದಿಗೊಳಿಸಿದೆ. ಪ್ರಸ್ತುತ ಜನರನ್ನು ಲೂಟಿ ಮಾಡುವುದೇ ಬಹುದೊಡ್ಡ ಆತಂಕ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಕರಾವಳಿಯ ಹುಟ್ಟಿದ ಸಂಸ್ಥೆಗಳನ್ನು ನಾಶ ಮಾಡಿದ ಬಿಜೆಪಿ:
ಕರಾವಳಿಯಲ್ಲಿ ಹುಟ್ಟಿದ 4 ಬ್ಯಾಂಕ್‌ ವಿಲೀನ ಮಾಡಿ ಬಿಜೆಪಿ ಕರಾವಳಿಗರಿಗೆ ದ್ರೋಹ ಬಗೆದಿದೆ. ಇಂದಿರಾ ಸ್ಥಾಪಿಸಿದ ನವಬಂದರುನ್ನು ಗುತ್ತಿಗೆ ಕೊಟ್ಟಿದ್ದಾರೆ. ಸಾರ್ವಜನಿಕ ಉದ್ಯಮಗಳನ್ನು ಮಾರಾಟ ಮಾಡಿದ್ದಾರೆ. ಸಾರ್ವಜನಿಕರ ಹಣವನ್ನು ಕೆಲವೇ ಉದ್ಯಮಿಗಳಿಗೆ ನೀಡಿದ್ದಾರೆ. ಇದುವೇ ನಿಜವಾದ ಭ್ರಷ್ಟಾಚಾರದ ನಿಜವಾದ ಆತಂಕ ಎಂದರು. ರೈತರು, ಕೂಲಿ ಕಾರ್ಮಿಕರು, ಅಭಿವೃದ್ಧಿ ವಿಚಾರ ಪ್ರಸ್ತಾಪ ಮಾಡದೇ ಧರ್ಮಗಳ ನಡುವೆ ಅಂತರ ಸೃಷ್ಟಿಸಿ ಚುನಾವಣೆ ಎದುರಿಸುತ್ತಿದ್ದಾರೆ. ಇದುವೇ ನಿಜವಾದ ಆತಂಕವಾದ, ಭಯೋತ್ಪಾದನೆ ಇದನ್ನು ತಳಮಟ್ಟದಿಂದ ಕಿತ್ತುಹಾಕಬೇಕಿದೆ ಎಂದರು.

ರಾಜೀವ್‌ ಗಾಂಧಿ ದೂರದೃಷ್ಟಿಯಿಂದ ಬೆಂಗಳೂರು ಐಟಿ ಹಬ್‌ ಆಯಿತು. ಆದರೆ ಬಿಜೆಪಿಗೆ ಅಭಿವೃದ್ಧಿ ಅಗತ್ಯ ವಿಲ್ಲದ ಕಾರಣ ಧರ್ಮದ ವಿಚಾರ ಎಳೆದುತರುತ್ತಿದೆ. ಈ ನಿಟ್ಟಿನಲ್ಲಿ ವಾಸ್ತವ ಅರಿತು ಮತದಾನ ಮಾಡಬೇಕಿದೆ ಎಂದು ಎಚ್ಚರಿಸಿದರು. ಸಣ್ಣ ವ್ಯಾಪಾರಿಗಳು, ಉದ್ದಿಮೆ ಸಂಪೂರ್ಣ ನಾಶವಾಗಿದೆ. ಸ್ಕೂಲ್‌ ಮ್ಯಾನೇಜ್‌ಮೆಂಟ್‌, ಗುತ್ತಿಗೆದಾರರು ಕಮಿಷನ್‌ ಸರ್ಕಾರದಿಂದ ತೊಂದರೆಗೆ ಸಿಲುಕಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರು ಭ್ರಷ್ಟಾಚಾರದ ಹಾದಿ ಬದಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌, ಕ್ಷೀರಭಾಗ್ಯ ಯೋಜನೆ ನೀಡಿದೆ. ಮುಂದೆ ಖಾಲಿಯಿರುವ 5ಲಕ್ಷ ಸರ್ಕಾರಿ ಉದ್ಯೋಗ ಭರ್ತಿಮಾಡುವ ಭರವಸೆ ನೀಡುತ್ತೇವೆ. ಕೇವಲ ಭರವಸೆಯಲ್ಲ ಈಡೇರಿಸಿಯೇ ತೀರುತ್ತೇವೆ ಎಂದರು. 200 ಯುನಿಟ್‌ ವಿದ್ಯುತ್‌ ಉಚಿತ, ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ 10 ಕೆ.ಜಿ. ಅಕ್ಕಿ ನೀಡಲಾಗುವುದು ಇದು ಕಾಂಗ್ರೆಸ್‌ ಭರವಸೆ ಎಂದರು.
ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು. ಫಿಶಿಂಗ್‌ ಬೋಟ್‌ ಖರೀದಿಗೆ 15 ಲಕ್ಷ ಸಬ್ಸಿಡಿ, ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ, ಐಟಿ ಹಬ್‌ ನಿರ್ಮಾಣ, ಅಡಕೆ ಕೃಷಿಕರಿಗೆ ಕಲ್ಯಾಣಕ್ಕೆ 15 ಕೋಟಿ ರೂ.ಗಳ ಕಲ್ಯಾಣ ನಿಧಿ, ಬೀದರ್‌ನಿಂದ ಚಾಮರಾಜನಗರ ಇಂಡಿಸ್ಟ್ರಿಯಲ್‌ ಕಾರಿಡಾರ್‌ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಾಂಗ್ರೆಸ್‌ ಹಿರಿಯ ಮುಖಂಡ ಜನಾರ್ದನ ಪೂಜಾರಿ, ಹರೀಶ ಕುಮಾರ್‌, ಅಭಯ ಚಂದ್ರ ಮೊದಲಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು