News Karnataka Kannada
Thursday, April 25 2024
Cricket
ಮಂಗಳೂರು

ಸೊಂಟಕ್ಕೆ ಬಲೂನು ಕಟ್ಟಿಕೊಂಡು ನದಿಗೆ ಜಿಗಿದು ಉದ್ಯಮಿ ಆತ್ಮಹತ್ಯೆ

Businessman commits suicide by jumping into river with balloon tied to his waist
Photo Credit : Pexels

ಕಡಬ: ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ.

ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್‌ ಎಂಬ ಅಂಗಡಿ ಹೊಂದಿರುವ ಸಾಮಾಜಿಕ, ಧಾರ್ಮಿಕ ಮುಂದಾಳು ಚಂದ್ರಶೇಖರ ಪೂಜಾರಿ (70) ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ 4 ಗಂಟೆ ವೇಳೆಗೆ ಕಾರನ್ನು ಸೇತುವೆ ಮೇಲೆ ನಿಲ್ಲಿಸಿ ಸೊಂಟಕ್ಕೆ ಹಗ್ಗದಿಂದ ಬಲೂನು ಕಟ್ಟಿಕೊಂಡು ನದಿಗೆ ಜಿಗಿದಿದ್ದಾರೆ. ಶವ ಹುಡುಕಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಸೊಂಟಕ್ಕೆ ಬಲೂನು ಕಟ್ಟಿಕೊಂಡಿದ್ದರು ಎನ್ನಲಾಗಿದೆ. ರಾತ್ರಿ ಭಜನೆ ಮಾಡಿ ಮೊಮ್ಮಕ್ಕಳೊಂದಿಗೆ ಬಲೂನ್‌ನಲ್ಲಿ ಆಟವಾಡುತ್ತಿದ್ದರು. ಅದೇ ಬಲೂನ್ ಕಟ್ಟಿ ನದಿಗೆ ಹಾರಿದ್ದಾರೆ. ಶಾಂತಿಮೊಗರಿನ ಪೂವಪ್ಪ ಗೌಡ ಎಂಬವರು ನದಿಯಿಂದ ಶವ ಮೇಲೆತ್ತಿದ್ದಾರೆ. ಬಲೂನು ಇದ್ದ ಕಾರಣ ಶವ ಹುಡುಕಲು ಸಮಸ್ಯೆಯಾಗಿಲ್ಲ.

ಪತ್ನಿ, ಇಬ್ಬರು ಪುತ್ರರಿದ್ದು, ಇಬ್ಬರಿಗೂ ಮದುವೆಯಾಗಿದೆ. ಸಂತೃಪ್ತ ಕುಟುಂಬ, ವ್ಯಾಪಾರ ವಹಿವಾಟು ಕೂಡ ಚೆನ್ನಾಗಿತ್ತು. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದು, ಹೀಗಿದ್ದರೂ ಆತ್ಮಹತ್ಯೆ ಮಾಡಿಕೊಂಡಿರುವುದು ಪರಿಸರದಲ್ಲಿ ಆಶ್ಚರ್ಯವುಂಟು ಮಾಡಿದೆ. ಕಾರಿನಲ್ಲಿ ಅವರು ಬರೆದಿಟ್ಟ ಪತ್ರವೊಂದು ಸಿಕ್ಕಿದೆ. ಅದರಲ್ಲಿ ಕಾರು ಕೀ ಸೇತುವೆ ಮೇಲಿದೆ ಎಂದು ಬರೆದಿಟ್ಟಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಶವ ಮಹಜರು ಮಾಡಿದರು.

ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಚಂದ್ರಶೇಖರ ಪೂಜಾರಿ ಯಕ್ಷಗಾನ ಅರ್ಥಧಾರಿ ಮತ್ತು ಸಂಘಟಕರೂ ಆಗಿದ್ದರು. ಆಲಂಕಾರು ಮೂರ್ತೆದಾರರ ಸಹಕಾರಿ ಸಂಘ ಮೂರು ಅವಧಿಗೆ ಅಧ್ಯಕ್ಷರಾಗಿದ್ದರು. ಶರವೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು