News Kannada
Saturday, September 23 2023
ಮಂಗಳೂರು

ಪುತ್ತೂರು: ಮಣಿಪುರ ಹಿಂಸಾಚಾರ ಖಂಡಿಸಿ ಸಿಐಟಿಯು ಪ್ರತಿಭಟನೆ

CITU protests against Manipur violence
Photo Credit : News Kannada

ಪುತ್ತೂರು: ಮಣಿಪುರ ಹಿಂಸಾಚಾರ ಖಂಡಿಸಿ ಸಿಐಟಿಯು ಪುತ್ತೂರು ಘಟಕದಿಂದ ಪ್ರತಿಭಟನೆ ನಡೆಯಿತು.

ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಬಿ.ಎಂ.ಭಟ್ , ಕಳೆದ ಒಂದು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಸಾವಿರಾರು ಕುಟುಂಬಗಳು ಬೀದಿ ಪಾಲಾಗಿದೆ. ಹಿಂಸೆ ತಡೆಯುವಲ್ಲಿ ಅಲ್ಲಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ವಿಫಲವಾಗಿದೆ ಎಂದರು. ಜನರಲ್ಲಿ ಕೋಮುಭಾವನೆ ಕೆರಳಿಸುವ ಕೆಲಸ ಬಿಜೆಪಿಯಿಂದ ನಡೆಯುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಇಂಥ ಪ್ರಯೋಗಗಳು ನಡೆದಿದೆ.

ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೋಮುಗಲಭೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಹಿಂದುತ್ವದ ಬಗ್ಗೆ ಮಾತನಾಡುವವರೇ ಇಂದು‌ ಪರಸ್ಪರ ಕಚ್ಚಾಡುವ ಸ್ಥಿತಿ ಪುತ್ತೂರಿನಲ್ಲಿದೆ. ನನ್ನ ಹಿಂದುತ್ವ ಸರಿ,ನಿನ್ನ ಹಿಂದುತ್ವ ಸರಿಯಿಲ್ಲ ಎನ್ನುವ ಚರ್ಚೆಯಾಗುತ್ತಿದೆ ಎಂದರು. ಕೋಮುವಾದಿ,ಮತಾಂಧ ಮತ್ತು ಭಯೋತ್ಪಾದಕರೆಲ್ಲರ ರಕ್ತ ಒಂದೇ ಆಗಿದೆ ಎಂದರು.

See also  ಮೈಸೂರು: ಸಮಾನತೆಯಿಂದ ನೋಡುವ  ಗುಣ ಬೆಳೆಸಿಕೊಳ್ಳಿ ಎಂದ ಡಿ.ಟಿ.ಪ್ರಕಾಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು