ಉಡುಪಿ: ವಿಪಕ್ಷಗಳ ಟೀಕೆಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರು ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದುಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಿದೆ. ಜಾತಿ ಧರ್ಮ, ಪಕ್ಷ ಬೇಧ ಮರೆತು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.
ಬಿಜೆಪಿಗರೇ ಟೀಕೆ ಮಾಡುವಾಗ ಆಲೋಚನೆ ಮಾಡಿ, ನೀವು ಯಾವತ್ತೂ ಕೂಡ ಹೇಳಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ಕುಡುಕಿದರು