News Karnataka Kannada
Friday, April 19 2024
Cricket
ಮಂಗಳೂರು

ಹಿಂದು ಕಾರ್ಯಕರ್ತರ ಹೇಳಿಕೆ ವಿಚಾರ, ಮಾನನಷ್ಟ ಪ್ರಕರಣ ದಾಖಲು ಮಾಡಲು ಮುಂದಾದ ಕಾಂಗ್ರೆಸ್‌

Congress to file defamation case against Hindu activists over their remarks
Photo Credit : News Kannada

ಮಂಗಳೂರು: ಸಿದ್ದರಾಮಯ್ಯ 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಹರೀಶ್ ಪೂಂಜಾ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲು ಕಾಂಗ್ರೆಸ್ ಮುಂದಾಗಿದೆ.

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಹರೀಶ್ ಪೂಂಜಾ ವಿರುದ್ಧ ವಾಗ್ದಾಳಿ‌ ನಡೆಸಿದರು.

ಹರೀಶ್ ಪೂಂಜಾ ಚುನಾವಣೆ ಗೆಲ್ಲಲು 40% ಕಮಿಷನ್ ಹಣ ಹಂಚಿದ್ದಾರೆ. ಬೆಳ್ತಂಗಡಿಯಲ್ಲಿ ಚುನಾವಣೆ ಗೆಲ್ಲಲು ಹಣದ ಹೊಳೆ ಹರಿಸಿದ್ದಾರೆ. ಸುಮಾರು 30 ರಿಂದ 40 ಕೋಟಿ ರೂಪಾಯಿ ಹಣ ಚುನಾವಣೆಯಲ್ಲಿ ಹರೀಶ್ ಪೂಂಜಾ ಖರ್ಚು ಮಾಡಿದ್ದಾರೆ. ನಮ್ಮ ಸರ್ಕಾರ ಪೂಂಜಾ ಅಕ್ರಮದ ವಿರುದ್ಧ ತನಿಖೆ ನಡೆಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಕೊಲೆ ಮಾಡಿದ್ದಾರೆ ಎಂದು ಪೂಂಜಾ ಹೇಳಿದ್ದಾರೆ.

ಮೂರುವರೆ ವರ್ಷ ಬಿಜೆಪಿ ಸರ್ಕಾರ ಆಡಳಿತದಲ್ಲಿತ್ತು. ಆಗ ಯಾಕೆ ಈ ಕೊಲೆಗಳ ಬಗ್ಗೆ ತನಿಖೆ ನಡೆಸಲಿಲ್ಲ. ಹೀಗಾಗಿ ಹೇಳಿಕೆ ನೀಡಿರುವ ಹರೀಶ್‌ ಪೂಂಜಾ ವಿರುದ್ದ ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ತಿಳಿಸಿದರು. ಮೊಕದ್ದಮೆ ಹೂಡಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಶಾಸಕ ಹರೀಶ್ ಪೂಂಜಾ ಈ ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಚುನಾವಣೆ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸರನ್ನು ಹರೀಶ್ ಪೂಂಜಾ ಬುಕ್ ಮಾಡಿದ್ದರು. ಬೆಳ್ತಂಗಡಿ ಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹರೀಶ್ ಪೂಂಜಾ ದೌರ್ಜನ್ಯ ನಡೆಸುತಿದ್ದಾರೆ.

ಈಗ ಸರಕಾರ ನಮ್ಮದಿದೆ. ಹರೀಶ್ ಪೂಂಜಾ‌ ಜಾಗ್ರತೆ ವಹಿಸಬೇಕು. ಜಿಲ್ಲೆಯಲ್ಲಿ ಡ್ರಗ್ಸ್ , ಮಟ್ಕಾ, ಚೀಟಿ ದಂಧೆ, ಮರಳು ಮಾಫಿಯಾ ವ್ಯಾಪಕವಾಗಿದೆ. ಪೊಲೀಸರು ಈ ಅಕ್ರಮ ತಡೆಯಲು ಕಠಿಣ ಕ್ರಮ ಕೈಗೊಳ್ಳ ಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಸ್ಟೇಷನ್ ಗಳಿಗೆ ಅಕ್ರಮ ದಂಧೆ ಯ ಮಾಮೂಲು ಹೋಗುತ್ತದೆ. ಇದು ನಿಲ್ಲಬೇಕು. ಈ ಅಕ್ರಮಗಳ ಹಿಂದೆ ಯಾರಿದ್ದಾರೆ ಎಂಬುದು ಪೊಲೀಸರಿಗೆ ಗೊತ್ತಿದೆ. ಈ ಆಕ್ರಮ‌ ದಂಧೆಯ ಕಿಂಗ್ ಪಿನ್ ಯಾರು ಎಂಬುದು ಪೊಲೀಸರಿಗೆ ಗೊತ್ತಿದೆ. ಈಬಗ್ಗೆ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು