News Karnataka Kannada
Friday, April 19 2024
Cricket
ಮಂಗಳೂರು

ಭ್ರಷ್ಟಾಚಾರ ಮುಕ್ತ ಪುತ್ತೂರು: ಶಾಸಕ ಅಶೋಕ್ ಕುಮಾರ್ 

Corruption-free Puttur: MLA Ashok Kumar 
Photo Credit : News Kannada

ಬಂಟ್ವಾಳ: ಅಭಿವೃದ್ಧಿಯ ನೆಪದಲ್ಲಿ ಜನರಿಗೆ ತೊಂದರೆ ನೀಡುವ ಕಾರ್ಯ ಮಾಡುವುದಿಲ್ಲ. ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಲಂಚ ಹಣ ನೀಡುವ ಅಗತ್ಯವಿಲ್ಲ. ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರ ಮನೆಗಳಿಗೆ ತಲುಪಿಸಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಮಂಗಳವಾರ ಸಂಜೆ ವಿಟ್ಲ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ನಡೆದ ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ ಉತ್ತಮ ವ್ಯಕ್ತಿತ್ವ ಇರುವ ವ್ಯಕ್ತಿ ಪಕ್ಷಕ್ಕೆ ಲಭಿಸಿದ್ದಾರೆ. ಕರಾವಳಿಯ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ಅಶೋಕ್ ಕುಮಾರ್ ರೈ ಮಾಡಲಿದ್ದಾರೆ. ಜನರ ಎಲ್ಲ ಬೇಡಿಕೆಯನ್ನು ಪೂರೈಸಿ ಐದು ವರ್ಷದಲ್ಲಿ ದೊಡ್ಡ ಮಟ್ಟದ ಅಭಿನಂದನೆಯನ್ನು ಪಡೆಯುವಂತಾಗಲಿ ಎಂದು ತಿಳಿಸಿದರು.

ಅಭಿನಂದನಾ ಭಾಷಣ ನೆರವೇರಿಸಿದ ವಿಟ್ಲ ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಾಜಾರಾಮ ಕೆ. ಬಿ. ಮಾತನಾಡಿ ಜಾತ್ಯತೀತ ಮನಸ್ಸುಗಳು ಸೋತು ಹೋದ ದಿನಗಳಲ್ಲಿ ಅಶೋಕ್ ಕುಮಾರ್ ರೈ ಗೆಲುವು ಸಾಧಿಸುವ ಮೂಲಕ ಮತ್ತೆ ಜನರಿಗೆ ಆಶಾಕಿರಣ ಮೂಡಿಸಿದೆ. ಜನರ ಕಷ್ಟಗಳ ಬಗ್ಗೆ ನಿರಂತರ ಕೆಲಸ ಮಾಡಿದ ಶಾಸಕರು ಈಗ ಕ್ಷೇತ್ರದ ಕೆಲಸ ಮಾಡುವಂತಾಗಿದೆ ಎಂದು ತಿಳಿಸಿದರು.

ವಿಟ್ಲ – ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್‌, ವಿಟ್ಲ ನಗರ ಕಾಂಗ್ರೆಸ್ ಸೇರಿ ವಿವಿಧ ಗ್ರಾಮ ಸಮಿತಿಗಳ ವತಿಯಿಂದ ಅಭಿನಂದನೆ ನಡೆಯಿತು.

ಕೆಪಿಸಿಸಿ ಸದಸ್ಯ ಎಂ. ಎಸ್. ಮಹಮ್ಮದ್, ಕಾವು ಹೇಮನಾಥ ಶೆಟ್ಟಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಜೋಕಿಮ್ ಡಿ’ಸೋಜ, ನಝೀರ್ ಮಠ, ಉಮಾನಾಥ ಶೆಟ್ಟಿ, ನೂರುದ್ದೀನ್ ಸಾಲ್ಮರ, ಫಾರೂಕ್ ಪೆರ್ನೆ, ಪದ್ಮನಾಭ ಪೂಜಾರಿ ಸಣ್ಣಗುತ್ತು, ಮಹೇಶ್ ರೈ, ಶ್ರೀನಿವಾಸ ಶೆಟ್ಟಿ ಕೊಲ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಡೀಕಯ್ಯ, ಪದ್ಮಿನಿ, ಲತಾ ಅಶೋಕ್, ಮೋಹನ ಗುರ್ಜಿನಡ್ಕ, ಎಲ್ಯಣ್ಣ ಪೂಜಾರಿ ಮೈರುಂಡ, ರಾಮಣ್ಣ ಪಿಲಿಂಜ, ಜಯಪ್ರಕಾಶ್ ಬದಿನಾರು, ಸಾಹಿರಾ ಬಾನು, ನೆಬಿಸ, ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು, ಗ್ರಾಮ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು