News Kannada
Wednesday, May 31 2023
ಮಂಗಳೂರು

ನಿರ್ಮಾಣ ಹಂತದ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಪರವಾನಗಿ ರದ್ದುಪಡಿಸುವಂತೆ ಆಗ್ರಹ

Demand for cancellation of licence of under-construction Christian chapel
Photo Credit : News Kannada

ಕೊಡಂಕೂರು: ಮಂಗಳೂರಿನ ಬಿಕರ್ನಕಟ್ಟೆ ಮೂಲದ ಸಂಸ್ಥೆಯೊಂದು ಪುತ್ತೂರು ಗ್ರಾಮದ ಕೊಡಂಕೂರಿನ ಸರ್ವೆ ನಂಬರ್ 38/1p1 ನಲ್ಲಿರುವ 1.73 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಹೊರಟಿರುವ ಕಟ್ಟಡ ಇದೀಗ ಬಹಳಷ್ಟು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಡಿಸ್ ಕಾಲ್ಸ್ದ್ ಕಾರ್ಮೆಲೈಟ್ಸ್ ಕರ್ನಾಟಕ ಗೋವಾ ಪ್ರೋವಿನ್ಸ್ ಹೆಸರಲ್ಲಿ ಈ ಕಟ್ಟಡ ನೋಂದಣಿಯಾಗಿದ್ದು, ಇದೊಂದು ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರ ಎಂದು ಸ್ಥಳೀಯ ನಾಗರಿಕರು ಮತ್ತು ಹಿಂದೂ ಸಂಘಟನೆಗಳು ಆರೋಪಿಸುತ್ತಿವೆ.

ಈ ಪ್ರದೇಶದಲ್ಲಿ ಸದ್ದಿಲ್ಲದೆ ಮತಾಂತರ ನಡೆಸುವ ಪ್ರಾರ್ಥನಾ ಮಂದಿರ ನಿರ್ಮಾಣ ಮಾಡಲು ಹೊರಟಿದ್ದಾರೆ. ಕ್ರಿಶ್ಚಿಯನ್ ಸಮುದಾಯದವರು ಇಲ್ಲಿ ಇಲ್ಲವಾದರೂ ಏಕೆ ಈ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಪ್ರಶ್ನಿಸುತ್ತಿದ್ದಾರೆ.

ಇಲ್ಲಿ ಹಿಂದುಳಿದ ಬುಡಕಟ್ಟು ಮತ್ತು ಅಲೆಮಾರಿ ಜನಾಂಗದ ಜನರು ಹೆಚ್ಚಾಗಿ ವಾಸಿಸುತ್ತಿದ್ದು, ಅನಧಿಕೃತವಾಗಿ ಪರವಾನಿಗೆ ಪಡೆದುಕೊಂಡು ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆ. ಇದರಿಂದ ಹಿಂದೂ ಸಮುದಾಯದ ಹಕ್ಕಿಗೆ ಧಕ್ಕೆ ಉಂಟಾಗಿದೆ. ಅನಧಿಕೃತವಾಗಿ ನೀಡಿರುವ ಲೈಸನ್ಸ್ ಕೂಡಲೇ ರದ್ದುಪಡಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ತಕ್ಷಣವೇ ಕಾಮಗಾರಿ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿ ಪ್ರಾರ್ಥನಾ ಮಂದಿರ ನಿರ್ಮಿಸಿ, ಮತಾಂತರ ಮಾಡುವ ಸಂಶಯ ವ್ಯಕ್ತವಾಗಿದೆ. ದಾಖಲೆಗಳನ್ನು ಪರೀಕ್ಷಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

See also  ಹಿಂದು ಕಾರ್ಯಕರ್ತರ ಹೇಳಿಕೆ ವಿಚಾರ, ಮಾನನಷ್ಟ ಪ್ರಕರಣ ದಾಖಲು ಮಾಡಲು ಮುಂದಾದ ಕಾಂಗ್ರೆಸ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು