ಮಂಗಳೂರು: ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗ ಬಡ ಜನರ ಕಲ್ಯಾಣಕ್ಕೆ ಆದ್ಯತೆ ನೀಡಿತ್ತು. ದೇಶದ ಅಭಿವೃದ್ಧಿ ಕುರಿತು ಕಾಂಗ್ರೆಸ್ ಮನೆ ಮಾತಾಗಿತ್ತು. ಇಂತಹ ವಾತಾವರಣ ಮತ್ತೆ ಮರುನಿರ್ಮಾಣವಾಗಲು ಕಾಂಗ್ರೆಸ್ಗೆ ಜನತೆ ಮತ್ತೊಮ್ಮೆ ಆಶೀರ್ವಾದ ನೀಡುತ್ತಾರೆ ಎಂದು ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಹೇಳಿದರು.
ಕಾವೂರು ಪರಿಸರದಲ್ಲಿ ಮತಯಾಚನೆ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ರಾಹುಲ್ ಗಾಂಧಿ ಅವರು ಮಂಗಳೂರಿಗೆ ಆಗಮಿಸಿದ ಹಿನ್ನಲೆಯಲ್ಲಿ ಕಾರ್ಯಕರ್ತರು ಪ್ರೇರಿತರಾಗಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಸರ್ಕಾರ ಬಡಜನರಿಗೆ ನೀಡಿದ್ದ ಕಲ್ಯಾಣ ಕಾರ್ಯಕ್ರಮಗಳು ನಮಗೆ ನೆರವಾಗಲಿವೆ ಎಂದರು.
ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಆಧಾರದಲ್ಲಿ ಆಡಳಿತ ಬೊಕ್ಕಸವನ್ನು ಕರ್ನಾಟಕ ದೇಶದಲ್ಲಿಯೇ ತಲೆತಗ್ಗಿಸುವಂತೆ ಆಗಿದೆ. ಇಂತಹ ಅವಮಾನವನ್ನು ರಾಜ್ಯದ ಜನತೆ ಸಹಿಸಿಕೊಳ್ಳುವ ದಿನ ಅಂತ್ಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡರಾದ ಸುರೇಂದ್ರ ಕಂಬಳಿ, ಸದಾಶಿವ ಶೆಟ್ಟಿ, ಪ್ರತಿಭಾ ಕುಳಾಯಿ ಮೊದಲಾದವರಿದ್ದರು.
ಆದ್ಯಪಾಡಿಯಲ್ಲಿ ಸಭೆ: ಅದ್ಯಪಾಡಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಇಂದು ಸಭೆ ನಡೆಸಿ, ಮಾತನಾಡಿ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಜನರಲ್ಲಿ ಕೋರಿದೆ. ಈ ವೇಳೆ ಬಿಜೆಪಿ ಕಾರ್ಯಕರ್ತ ರಂಗಣ್ಣ ಅದ್ಯಪಾಡಿರವರು ಕಾಂಗ್ರೆಸ್ ತತ್ವ ಸಿದ್ಧಾಂತ ನಂಬಿ ಪಕ್ಷ ಸೇರ್ಪಡೆಗೊಂಡರು. ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.