ಪುತ್ತೂರು: ಪುತ್ತೂರಿನಲ್ಲಿ ದೌರ್ಜನ್ಯಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರ ಆರೋಗ್ಯವನ್ನುಶಿವಮೊಗ್ಗದ ದಿ. ಹರ್ಷ ಸಹೋದರಿ ಅಶ್ವಿನಿ ವಿಚಾರಿಸಿದರು. ನಂತರ ಮಾತನಾಡಿದ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರವಾಗಿದೆ.
ಇಂದು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡಲು ಸಾಧ್ಯವಾಗುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಗೊಳಿಸಲು ಹೋರಾಡುತ್ತಿದ್ದಾರೆ. ಇದನ್ನು ಪ್ರತಿಯೊಬ್ಬರೂ ಕೂಡ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಕಾರ್ಯಕರ್ತರು ಸಮಾಜಕ್ಕೆ ದ್ರೋಹ ಮಾಡುತ್ತಿಲ್ಲ. ಇಂತಹ ಘಟನೆಗಳಿಂದ ಹಿಂದೂ ಕಾರ್ಯಕರ್ತರು ಯಾವತ್ತೂ ಕುಗ್ಗುವುದಿಲ್ಲ. ಈ ರೀತಿ ದೌರ್ಜನ್ಯ ಮಾಡ್ತಾ ಇದ್ರೆ ಹಿಂದೂ ಕಾರ್ಯಕರ್ತರು ಬೆಳೆಯುತ್ತಾರೆ ಹೊರತು ಕುಗ್ಗುವುದಿಲ್ಲ. ಅರುಣ್ ಕುಮಾರ್ ಪುತ್ತಿಲ ಇರುವವರೆಗೂ ಯಾವ ಕಾರ್ಯಕರ್ತನಿಗೂ ತೊಂದರೆ ಆಗುವುದಿಲ್ಲ.
ಪ್ರತಿಯೊಬ್ಬರ ಜೀವ ಅಮೂಲ್ಯವಾದದ್ದು. ಈ ರೀತಿಯ ದೌರ್ಜನ್ಯ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಸುಮಾರು 36 ರಷ್ಟು ಹಿಂದು ಕಾರ್ಯಕರ್ತರು ಬಲಿಯಾಗಿದ್ದಾರೆ. ಈ ರೀತಿ ಒಬ್ಬ ಹೋದರೆ ಸಾವಿರಾರು ಜನ ಹುಟ್ಟಿ ಬರ್ತಾರೆ. ಹಿಂದುತ್ವವನ್ನು ಬೆಳೆಸಿಕೊಳ್ಳುತ್ತೇವೆ. ಹಿಂದುತ್ವದ ಮೂಲಕ ಸಮಾಜವನ್ನ ಗಟ್ಟಿಗೊಳಿಸುತ್ತೇವೆ ಎಂದರು. ದೌರ್ಜನ್ಯ ಮಾಡಿದವರಿಗೂ ಮಕ್ಕಳು ಇರುತ್ತಾರೆ. ಮಾಡಿಸಲು ಕುಮ್ಮಕ್ಕು ಕೊಟ್ಟವರಿಗೂ ಮಕ್ಕಳು ಇದ್ದಾರೆ. ಪ್ರತಿಯೊಬ್ಬರಿಗೂ ನೋವಾಗುತ್ತದೆ.
ಇನ್ನು ಮುಂದೆ ಇದನ್ನು ಅರ್ಥ ಮಾಡಿಕೊಂಡು ಸಮಾಜಕ್ಕೆ ಮಾದರಿಯಾಗಿ ಬಾಳಬೇಕಿದೆ. ಕೇಸರಿ ಶಾಲು ಹಾಕಿದ ಕೂಡಲೇ ಹಿಂದುತ್ವ ಆಗಲ್ಲ. ಅದನ್ನ ಬುದ್ಧಿಯಲ್ಲಿಟ್ಟುಕೊಂಡು ಗಮನದಲ್ಲಿಟ್ಟುಕೊಂಡು ಹಿಂದುತ್ವಕ್ಕೆ ಕೆಲಸ ಮಾಡಿ ಎಂದರು.