ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳೂರಿಗೆ ಬಂದಿದ್ದಾರೆ. ಮಂಗಳೂರಿನ ಐಜಿಪಿ ಕಚೇರಿಗೆ ಆಗಮಿಸಿದ ಡಾ.ಜಿ.ಪರಮೇಶ್ವರ್ ಅವರಿಗೆ ಪೊಲೀಸರಿಂದ ಗೌರವ ರಕ್ಷೆ ನೀಡಲಾಯಿತು.
ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಕಮಿಷನರ್ ಕುಲದೀಪ್ ಜೈನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.
ದಕ್ಷಿಣ ಕನ್ನಡ ಎಸ್ಪಿ ರಿಷ್ಯಂತ್, ಉಡುಪಿ ಎಸ್ಪಿ ಅಕ್ಷಯ್, ಉ.ಕ ಎಸ್ಪಿ ವಿಷ್ಣುವರ್ಧನ್, ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಉಪಸ್ಥಿತರಿದ್ದರು. ಕೆಲವೇ ಕ್ಷಣಗಳಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುವರು.