News Karnataka Kannada
Friday, April 19 2024
Cricket
ಮಂಗಳೂರು

ಸಂಸದ ನಳಿನ್‌ ಅಷ್ಟು ಸಹಾಯ ಮಾಡಿಯೂ ಯಾರಿಗೂ ಗೊತ್ತಾಗಬಾರದು ಎಂದರೆ ಹೇಗೆ..!

How can't mp Nalin help so much but no one knows?
Photo Credit : News Kannada

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಶ್ರೀ ದೇವಿ ಎಂಬ ದೇಶಭಕ್ತ ಹೆಣ್ಣುಮಗಳು ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿದ್ದಾರೆ. ಈ ವಿಷಯ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ಬಂದಿದ್ದು, ಘಟನೆ ನಡೆದ ವೇಳೆ ಸಂಸದರು ದೆಹಲಿಯಲ್ಲಿದ್ದರು. ತಕ್ಷಣ ಆಕೆಯ ಚಿಕಿತ್ಸೆಗೆ ತುರ್ತಾಗಿ ಒಂದೂವರೆ ಲಕ್ಷ ರೂಪಾಯಿ ಕಳುಹಿಸಿಕೊಟ್ಟಿದ್ದಾರೆ. ಅದರೊಂದಿಗೆ ಅವರ ಮನೆಯವರೊಂದಿಗೆ ಮಾತನಾಡಿ ಧೈರ್ಯ ತುಂಬಿದ್ದಾರೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದಲ್ಲಿ ಸಹಾಯ ಮಾಡಲು ಕೂಡ ಸಿದ್ಧ ಎಂದು ತಿಳಿಸಿದ್ದಾರೆ.

ಇಷ್ಟು ಸಹಾಯ ಮಾಡಿದರೂ ನಳಿನ್ ಅವರು ಇದನ್ನು ಎಲ್ಲಿಯೂ ಹೇಳಿಕೊಂಡಿಲ್ಲ. ಇಂತಹ ನೂರಾರು ಸಹಾಯಗಳನ್ನು ಮೌನದಲ್ಲಿಯೇ ಮಾಡುವ ನಳಿನ್ ಕುಮಾರ್ ಕಟೀಲ್ ಬಹಿರಂಗ ಪ್ರಚಾರ ಎಂದೂ ಬಯಸಿದವರಲ್ಲ. ತಾವು ಸಹಾಯ ಮಾಡಿದ್ದನ್ನು ಯಾರಿಗೂ ಹೇಳುವುದು ಬೇಡ ಎಂದು ತಮ್ಮಿಂದ ಸಹಾಯ ಪಡೆದವರಿಗೂ ಅವರು ಹೇಳುತ್ತಾರೆ ಎಂಬುದು ಅವರ ಆಪ್ತವಲಯದ ಮಾತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು