News Karnataka Kannada
Thursday, March 28 2024
Cricket
ಮಂಗಳೂರು

ಪೊಲೀಸರು ಸರಿಯಾಗಿ ಕೆಲಸ ಮಾಡದಿದ್ದಲ್ಲಿ ನಮ್ಮಲ್ಲಿ ಬೇರೆ ಔಷಧ ಇದೆ: ಗೃಹ ಸಚಿವ ಪರಮೇಶ್ವರ್‌

Photo Credit :

ಮಂಗಳೂರು: ರಾಜ್ಯದ ಜನ ಬಿಜೆಪಿ ಮೇಲಿನ ಆಕ್ರೋಶದಿಂದ ಮತ ಹಾಕಿದ್ದಾರೆ. ಕಾಂಗ್ರೆಸ್ ‌ಮತ್ತು ಅದರ ನಾಯಕತ್ವ ನಂಬಿ ನಮಗೆ 135 ಸೀಟ್ ಕೊಟ್ಟಿದ್ದಾರೆ. ಜ‌ನ ನಮ್ಮನ್ನು ವಿಶ್ವಾಸದಿಂದ ಉತ್ತಮ ಆಡಳಿತದ ಹಿನ್ನೆಲೆಯಲ್ಲಿ ಗೆಲ್ಲಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.
ಮಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ನಾವು ಐದು ಗ್ಯಾರಂಟಿ ಕೊಟ್ಟಿದ್ದೆವು. ನಾವು ಗ್ಯಾರಂಟಿ ಘೋಷಣೆ ಬಗ್ಗೆ ಬೇಕಾಬಿಟ್ಟಿಯಾಗಿ ತೀರ್ಮಾನಿಸಿರಲಿಲ್ಲ. ಹಣಕಾಸು ಖರ್ಚಿನ ಲೆಕ್ಕಾಚಾರ ಮಾಡಿ ಸಾದ್ಯತೆ ಬಳಿಕ ಪ್ರಕಟ ಮಾಡಿದ್ದೆವು. ನಾವು ಯಾವುದೇ ಬೇಜವಾಬ್ದಾರಿಯಿಂದ ಘೋಷಣೆಗಳನ್ನು ಮಾಡಿರಲಿಲ್ಲ. ಕಾಂಗ್ರೆಸ್ ದೇಶ ದಿವಾಳಿ ಮಾಡುತ್ತದೆ ಅಂತ ಬಿಜೆಪಿ ಮತ್ತು ಮೋದಿ ಹೇಳುತ್ತಿದ್ದಾರೆ. ಆದರೆ ನಾವು ಘೋಷಣೆ ಗಳನ್ನು ಬೇಜವಾಬ್ದಾರಿಯಿಂದ ಮಾಡಿಲ್ಲ. ಗೃಹ ಇಲಾಖೆ ನನಗೆ ಹ್ಯಾಟ್ರಿಕ್ ಆಗಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಹೀಗೆ ಹೇಳಿದ್ದೆ. ಜನರಿಗೆ ಸೇವೆ ಮಾಡಲು ಬೇರೆ ಖಾತೆ ಕೊಡಿ ಎಂದು ಹೇಳಿದ್ದೆ. ಆದರೆ ಸಿಎಂ ಅವರು ದ.ಕ ಜಿಲ್ಲೆಯರಿಗೆ ನೀವೇ ಹೋಂ ಮಿನಿಸ್ಟರ್ ಆಗಬೇಕು ಎಂದು ಹೇಳಿದರು. ಸದ್ಯ ಪೊಲೀಸರ ಸಭೆ ನಡೆಸಿ ಕಠಿಣ ಕ್ರಮಗಳ ಬಗ್ಗೆ ಸೂಚಿಸಿದ್ದೇನೆ. ಯಾವುದೇ ಕಾರಣಕ್ಕೂ ನೈತಿಕ ಪೊಲೀಸ್ ಗಿರಿ ಸಹಿಸಲ್ಲ ಎಂದು ಹೇಳಿದ್ದೇನೆ. ಪ್ರಣಾಳಿಕೆ ರಚನೆ ವೇಳೆ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆಯವರು ಕೋಮು ವಿಚಾರದ ಕಾರಣಕ್ಕೆ ಹೂಡಿಕೆಯಾಗುತ್ತಿಲ್ಲ ಎಂದು ಹೇಳಿದ್ದರು. ಈ ಕಾರಣದಿಂದ ಇಲ್ಲಿನ ಪೊಲೀಸ್ ಅಧಿಕಾರಿಗಳಿಗೆ ನಾನು ಖಡಕ್ ಸೂಚನೆ ಕೊಟ್ಟಿದ್ದೇನೆ

ಮೊದಲು ಹೇಗೆ ಇದ್ದರೋ ಗೊತ್ತಿಲ್ಲ, ಏನೇನ್ ಆಟ ಆಡಿದ್ದರೋ ಗೊತ್ತಿಲ್ಲ. ಕೇಸರಿಕರಣ ಮಾಡಿದ್ದೋ ಮತ್ತೊಂದು ಈಗ ನನಗೆ ಅಗತ್ಯ ಇಲ್ಲ. ಆದರೆ‌ ಇನ್ನು ಮುಂದೆ ಪೊಲೀಸರು ಸರಿಯಾಗಿ ಕೆಲಸ ಮಾಡಬೇಕು. ಮಾಡದೇ ಇದ್ದಲ್ಲಿ ನಮ್ಮ ಔಷಧಾಲಯದಲ್ಲಿ ಬೇರೆ ಔಷಧಿ ಇದೆ. ಇಲ್ಲಿ ಕಾಂಗ್ರೆಸ್ ಸೋತಿದೆ ಅನ್ನುವ ಭಾವನೆ ಬೇಡ. ಇವತ್ತು ಅಧಿಕಾರ ಸಿಕ್ಕಿದೆ, ಸರ್ಕಾರ ನಿಮ್ಮ ಜೊತೆಯಲ್ಲಿ ಕೆಲಸ ಮಾಡಲಿದೆ. ಯಾವುದೇ ಸಚಿವರು ಇಲ್ಲಿಗೆ ಭೇಟಿ ನೀಡಬೇಕು ಅಂದರೆ ನನಗೆ ತಿಳಿಸಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು