ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿನ ಪ್ರಯುಕ್ತ ಕುಪ್ಪೆಪದವು ಹಾಗೂ ಮುತ್ತೂರು ವಲಯ ಕಾಂಗ್ರೆಸ್ ವತಿಯಿಂದನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿದರು. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಹಾಗೂ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿ ಜನರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ಯಾವುದೇ ರಾಜಕೀಯ ಹಸ್ತಕ್ಷೇಪ ಮಾಡದೆ, ಹಾಲಿ ಶಾಸಕರು ಅಭಿವೃದ್ಧಿ ವಿಷಯದಲ್ಲಿ ಒಂದು ಹೆಜ್ಜೆ ಮುಂದಿಟ್ಟರೆ ಅವರ ಜೊತೆ ನಾನು ನಾಲ್ಕು ಹೆಜ್ಜೆ ಮುಂದಿಟ್ಟು ಸಹಕಾರ ನೀಡಲು ತಯಾರಿದ್ದೇನೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಸುಹೈಲ್ ಕಂದಕ್, ಅಬೂಬಕ್ಕರ್ ಕಲ್ಲಾಡಿ, ಹರಿಯಪ್ಪ ಮುತ್ತೂರು, ಚಂದ್ರಹಾಸ, ದಯಾನಂದ ಬೋಳಿಯ, ಪುನೀತ್ ಕಟ್ಟೆಮಾರ್, ಉಂಜಾಕ ಹಾಗೂ ಇನ್ನಿತರರು ಉಪಸ್ಥಿತರಿದ್ದರು.