ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ತುಳು ಧ್ವಜದ ಶಾಲು ಧರಿಸಿ ಪ್ರಮಾಣವಚನ ಸ್ವೀಕರಿಸಿದರು. ಭಗವಂತ, ಭಾರತ ಮಾತೆ, ತುಳುನಾಡಿನ ಮೇಲೆ ಪ್ರಮಾಣ ಮಾಡಿ ಪ್ರಮಾಣವಚನ ಸ್ವೀಕರಿಸಿದರು.
ಈ ಬಗ್ಗೆ ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು ನಾನು ನಿಮ್ಮೆಲ್ಲರಿಗೂ ಗರಿಷ್ಠ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ. ಮಂಗಳೂರು ದಕ್ಷಿಣವನ್ನು ರಾಜ್ಯದಲ್ಲಿಯೇ ಆದರ್ಶ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.