News Karnataka Kannada
Saturday, April 27 2024
ಮಂಗಳೂರು

ಕಾಪು: ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

Gurme Suresh Shetty seeks votes in Majoor panchayat limits
Photo Credit : News Kannada

ಕಾಪು: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನೆಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.

ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ನಂತರ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾತನಾಡಿ ಪಕ್ಷದದಲ್ಲಿ ಮಾಡಿದ ನಿಸ್ವಾರ್ಥ ಸೇವೆಯ ಮುಂದಿನ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಕೊಟ್ಟರು. ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿವರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಪರಿಹಾರದ ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಲೋಚನಾ ಭಟ್ ಬಂಟ್ವಾಳ ಹಾಗೂ ಕಾಪು ಪುರಸಭಾ ಸದಸ್ಯರಾದ ಹರಿಣಿ ಹಾಗೂ ಅನುಸೂಯ ಕಾಂಪ್ಲೆಕ್ಸ್ ನ ಅಧ್ಯಕ್ಷರಾದ ಡಾ. ಶ್ವೇತಾ ರವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು