News Kannada
Friday, September 22 2023
ಮಂಗಳೂರು

ಮಂಗಳೂರು ವಿವಿ ಗಣೇಶೋತ್ಸವ ವಿವಾದ: ಸ್ವತಃ ಪಂಚೆ ಶಾಲು ತೊಟ್ಟು ಪೂಜೆಯಲ್ಲಿ ಪಾಲ್ಗೊಂಡ ಉಪಕುಲಪತಿ

Mangalore University Ganeshotsav row: Vice-Chancellor performs puja wearing dhoti shawl himself
Photo Credit : News Kannada

ಮಂಗಳೂರು: ಮಂಗಳೂರು ವಿವಿ ಹಾಸ್ಟೆಲ್‌ ನ ಬದಲಿಗೆ ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಸಂಘ ಪರಿವಾರ ಈ ಹಿಂದೆ ಪಟ್ಟು ಹಿಡಿದಿದ್ದು, ರಾಜ್ಯಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ವಿವಿ ಉಪಕುಲಪತಿ ಜಯರಾಜ್‌ ಅಮೀನ್‌ ಅವರೇ ವಿವಿ ಆಡಿಟೋರಿಯಂನಲ್ಲಿಯೇ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ವಿವಾದ ಸದ್ಯದ ಮಟ್ಟಿಗೆ ಅಂತ್ಯ ಕಂಡಂತಾಗಿದೆ.

ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು, ಉತ್ತರ ವಿಭಾಗದ ಡಿಸಿಪಿ ಸಿದ್ಧಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು, ಅಹಿತಕರ ಘಟನ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು. ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಆರ್‌ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌, ಶಾಸಕ ಭರತ್‌ ಶೆಟ್ಟಿ ಅವರು ಕೂಡ ಪಾಲ್ಗೊಂಡಿದ್ದು, ಪೂರ್ಣಾಹುತಿ ವೇಳೆ ಹಾಜರಿದ್ದರು.

See also  ಬೆಳ್ತಂಗಡಿ: ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಪ್ರದರ್ಶನ ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು