ಮಂಗಳೂರು: ಮಂಗಳೂರು ದಕ್ಷಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯ 49ನೇ ಕಂಕನಾಡಿ ‘ಬಿ ‘ ವಾರ್ಡಿನಲ್ಲಿ ಪ್ರಚಾರ ಕೈಗೊಂಡರು.
ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಮೊದಲು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ, ಅಲ್ಲಿನ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸು ವಂತೆ ಕರೆನೀಡಿದರು.
ಈ ಸಂದರ್ಭದಲ್ಲಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಪದ್ಮರಾಜ್ ಆರ್., ಹಿರಿಯ ಮುಖಂಡರಾದ ಪ್ರಭಾಕರ್ ಶ್ರೀಯನ್, ಪ್ರಮುಖರಾದ ಯುವ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಪೂಜಾರಿ, ಉಮೇಶ್ ದೇವಾಡಿಗ, ಕೃತಿನ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಕಲಾ ಜೋಗಿ, ಪ್ರತ್ವಿರಾಜ್, ದೀಕ್ಷಿತ್ ಶೆಟ್ಟಿ, ಶಬೀರ್, ವಿಲ್ಫ್ರೆಡ್, ಹುಸೈನ್, ಅನಂತೇಶ್, ಶಶಿಧರ್ ಕೊಟ್ಟಾರಿ, ಗೋಪಾಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.