ಮಂಗಳೂರು: ಮಂಗಳೂರಿಗೆ ಬಿಪರ್ಜೋಯ್ ಚಂಡಮಾರುತದ ಆತಂಕ ಎದುರಾಗಿದೆ. ಈ ಕಾರಣದಿಂದ ಬೀಚ್ ಗಳಲ್ಲಿ ಪ್ರವಾಸಿಗರಿಗೆ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ತೀರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗುತ್ತಿದೆ. ಉಳ್ಳಾಲ ಕಡಲ ತೀರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ ಅಲೆಗಳು ಸಮುದ್ರ ತೀರಕ್ಕೆ ಬಡಿಯುತ್ತಿವೆ.
ಚಂಡಮಾರುತದ ಭೀತಿ ಹಿನ್ನೆಲೆಯಲ್ಲಿ ಉಳ್ಳಾಲ ಬೀಚ್ ಬಿಕೋ ಎನ್ನುತ್ತಿದೆ. ಅದೇರೀತಿ ಪ್ರವಾಸಿಗರ ಸಂಖ್ಯೆ ಕೂಡ ವಿರಳವಾಗಿದೆ. ಭಾರೀ ಗಾಳಿಯ ಕಾರಣಕ್ಕೆ ಬೀಚ್ ಗಳ ಬಳಿಯ ಅಂಗಡಿಗಳನ್ನು ಬಂದ್ ಮಾಡಲಾಗಿದೆ.