ಮಂಗಳೂರು: ಮಂಗಳೂರು ಹೊರವಲಯದ ಕಿನ್ನಿಗೋಳಿ ಎಂಬಲ್ಲಿ ಉರುಳಿಗೆ ಸಿಲುಕಿ ಚಿರತೆಯೊಂದು ಪ್ರಾಣಬಿಟ್ಟಿದೆ. ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಎಂಬಲ್ಲಿ ಉರುಳಿಗೆ ಸಿಲುಕಿದ ಚಿರತೆ ಪ್ರಾಣ ಬಿಟ್ಟಿದೆ.
ಉಳೆಪಾಡಿ ಮಿತ್ತಬೆಟ್ಟು ಬಳಿ ಕಾಡಿನಲ್ಲಿ ಕಾಡುಪ್ರಾಣಿ ಹಾವಳಿ ವಿಪರೀತವಾಗಿದ್ದು, ಸ್ಥಳೀಯರು ಕಾಡು ಪ್ರಾಣಿಗಳ ಹಾವಳಿ ತಡೆಯಲಾರದೆ ಹಾಕಿದ್ದ ಉರುಳಿಗೆ ಚಿರತೆ ಸಿಲುಕಿದೆ ಎನ್ನಲಾಗಿದೆ.
ಮಂಗಳವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.