News Karnataka Kannada
Saturday, April 20 2024
Cricket
ಮಂಗಳೂರು

ಮಂಗಳೂರು: ಇನಾಯತ್‌ ಅಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್‌ ಪ್ರಚಾರ

mangaluru-rajasthan-chief-minister-gehlot-campaigns-for-inayat-ali
Photo Credit : News Kannada

ಮಂಗಳೂರು: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಸುರತ್ಕಲ್‌ನಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ಅವರ ಪರ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಇನಾಯತ್‌ ಅಲಿ ಅಶೋಕ್‌ ಗೆಹ್ಲೊಟ್‌ ನನ್ನ ಪರ ಪ್ರಚಾರ ನಡೆಸಿದ್ದು ನನ್ನ ಸೌಭಾಗ್ಯ. ಅವರ ಪ್ರತಿಯೊಂದು ಮಾತುಗಳು ನನ್ನ ಕ್ಷೇತ್ರದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ಭರವಸೆಯನ್ನು ಹೆಚ್ಚಿಸಿತು. ನಾನು ಕ್ಷೇತ್ರದ ಅಭಿವೃದ್ದಿಗೆ ಪಣ ತೊಟ್ಟಿದ್ದು, ಅವರ ನುಡಿಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದರು.

ಎಡಪದವಿನ ರಾಮನಗರದಲ್ಲಿರುವ ಮನೆಗಳಿಗೆ ಇಂದು ಭೇಟಿ ನೀಡಿ, ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ಅಲ್ಲಿನ ಜನರು ತಮ್ಮ ಸಂಕಷ್ಟಗಳನ್ನು ಹೇಳಿಕೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನಿಮ್ಮ ಸಮಸ್ಯೆಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮದು ಎನ್ನುವ ಭರವಸೆ ನೀಡಿದರು. ಅದೇ ರೀತಿ ಎಡಪದವಿನ ಶ್ರೀ ರಾಮನಗರದ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರಕ್ಕೆ ಭೇಟಿ ನೀಡಿ, ಕ್ಷೇತ್ರದ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ತಮಿಳುನಾಡಿನ ಎಐಸಿಸಿ ಕಾರ್ಯದರ್ಶಿಯಾದ ಮೊಹಮ್ಮದ್ ಆರಿಫ್ ಹಾಗೂ ಪಾಂಡಿಚೇರಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹಸನ್ ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಮಾಹಿತಿ ನೀಡುವ ಕಾರ್ಯದಲ್ಲಿ ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು