News Karnataka Kannada
Saturday, April 20 2024
Cricket
ಮಂಗಳೂರು

ನಂತೂರು, ಕೆಪಿಟಿ ಜಂಕ್ಷನ್‌ನಲ್ಲಿ ಶೀಘ್ರ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಸದ ಸೂಚನೆ

MP instructs for quick construction of fly over at Nantur, KPT Junction
Photo Credit :

ಮಂಗಳೂರು: ನಂತೂರು ಮತ್ತು ಕೆಪಿಟಿ ಜಂಕ್ಷನ್‌ನಲ್ಲಿ ಫ್ಲೈ ಓವರ್‌ ನಿರ್ಮಾಣ ಪ್ರಕ್ರಿಯೆಗಳಿಗೆ ವೇಗ ನೀಡುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಹಾಗೂ ಆರಂಭಿಕ ಹಂತದಲ್ಲಿರುವ ಯೋಜನೆ ಕುರಿತು ಚರ್ಚೆ ನಡೆಸಿದರು.
ಎರಡೂ ಜಂಕ್ಷನ್‌ಗಳಲ್ಲಿ ಉಂಟಾಗುತ್ತಿರುವ ದಟ್ಟಣೆಯಿಂದ ವಾಹನ ಸವಾರರು ಪರಿತಪಿಸುತ್ತಿದ್ದು, ಫ್ಲೈ ಓವರ್‌ ನಿರ್ಮಾಣಕ್ಕೆ ಸಂಬಂಧಿಸಿದ ಬೇಡಿಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಯೋಜನಗೆ ಸಂಬಂಧಿಸಿದ ಭೂಮಿ ಒತ್ತುವರಿ, ಮರಗಳ ತೆರವು, ವಿದ್ಯುತ್‌ ಲೈನಗಳ ಸ್ಥಳಾಂತರ, ನಂತೂರಿನಲ್ಲಿ ಭೂ ಸ್ವಾಧೀನ ವಿಚಾರವಾಗಿ ನ್ಯಾಯಾಲಯದಲ್ಲಿರುವ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ನಳಿನ್‌ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಮುಖ್ಯಸ್ಥ ವಿವೇಕ್‌ ಜೈಸ್ವಾಲ್‌, ಅಪರ ಜಿಲ್ಲಾಧಿಕಾರಿ ಎಚ್‌. ಕೃಷ್ಣಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಲಿಂಗೇಗೌಡ, ದಕ್ಷಿಣ ಕನ್ನಡ ಡಿಎಫ್‌ಒ ಡಾ. ದಿನೇಶ್‌ ಕುಮಾರ್‌ ವೈ.ಕೆ., ಮೆಸ್ಕಾಂ ಕಾಯನಿರ್ವಾಹಕ ಎಂಜಿನಿಯರ್‌ ಲೋಹಿತ್‌, ವಿಶೇಷ ಭೂ ಸ್ವಾಧೀನಾಧಿಕಾರಿ ಬಿನೋಯ್‌ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು