News Karnataka Kannada
Saturday, April 20 2024
Cricket
ಮಂಗಳೂರು

ಕರೆಂಟ್‌ ಬಿಲ್‌ ಕಟ್ಟಬೇಡಿ ಎಂದು ಜನರಿಗೆ ಕರೆ ನೀಡಿದ ಸಂಸದ ನಳಿನ್‌

Nalin New Final
Photo Credit : Facebook

ಮಂಗಳೂರು: ಚುನಾವಣೆ ಪೂರ್ವದಲ್ಲಿ ಐದು ಉಚಿತ ಭರವಸೆ ಮೂಲಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಸರ್ಕಾರ ಬಂದು 24 ಗಂಟೆಯಲ್ಲಿ ಉಚಿತ ಭರವಸೆ ಈಡೇರಿಸುತ್ತೇವೆ ಎಂದು ಹೇಳಿದ್ದರು. ಇವತ್ತು 20 ದಿನ ಕಳೆದರೂ ಯಾವುದೇ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಆದೇಶ ಮಾಡಿದ್ದರೂ ಈವರೆಗೆ ಯಾವಾಗಿಂದ ಬರುತ್ತದೆ ಎಂಬ ಉಲ್ಲೇಖ ಇಲ್ಲ. ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಸಿದ್ದರಾಮಯ್ಯ ತನ್ನನ್ನೂ ಸೇರಿಸಿ ಉಚಿತ ಕರೆಂಟ್ ಅಂತ ಹೇಳಿದ್ದರು. ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂದು ಹೇಳಿದ್ದರು. ಅಲ್ಲದೆ ಯಾವುದೇ ಮಾನದಂಡ ಇಲ್ಲದೆ ಭಾಗ್ಯ ದೊರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದರು ಆದರೆ ಅವುಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಜನ ಆಶ್ವಾಸನೆ ನಂಬಿ ಮತ ಹಾಕಿದ್ದಾರೆ, ಮತದಾರರು ಆಕ್ರೋಶದಲ್ಲಿ ಇದ್ದಾರೆ. ಕರೆಂಟ್ ಬಿಲ್ ಸಂಗ್ರಹಕ್ಕೆ ಬಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಯುತ್ತಿದೆ. ಹೀಗಾಗಿ ನಾನೂ ಕೂಡ ಕರೆಂಟ್‌ ಬಿಲ್‌ ನೀಡಬೇಡಿ ಎಂದು ಕರೆಕೊಡುತ್ತೇನೆ.

ಜನರ ಆಕ್ರೋಶ ಸಹಜ, ಯಾರೂ ಬಿಲ್ ಕಟ್ಟಲೇ ಬಾರದು ಎಂದರು. ಈ ವೇಳೆ ಜನರಿಗೆ ತೊಂದರೆಯಾದರೆ ನಾವು ಜನರ ಪರವಾಗಿ ನಿಲ್ಲುತ್ತೇವೆ ಎಂದರು. ನೌಕರರಿಗೆ ಹಲ್ಲೆಯಾದ್ರೆ ಸರ್ಕಾರವೇ ಹೊಣೆ ಎಂದು ತಿಳಿಸಿದರು. ಕಾಂಗ್ರೆಸ್ ನ ರಾಜನೀತಿಯಿಂದ ರಾಜ್ಯದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಪ್ರಾರಂಭ ಮಾಡಿದೆ. ಅಶ್ವಥ್ ನಾರಾಯಣ್ ಯಾವುದೋ ಸಂದರ್ಭ ನೀಡಿದ ಹೇಳಿಕೆಗೆ ಈಗ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಇಟ್ಟುಕೊಂಡು ಕೇಸ್ ಮಾಡಿದ್ದಾರೆ. ಬಂಟ್ವಾಳದ ಮಾಣಿಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರ ಬದಲು ಹಲ್ಲೆಗೆ ಒಳಗಾದವರ ಮೇಲೆ ಕೇಸ್ ಹಾಕಿದ್ದಾರೆ. ಕಾಂಗ್ರೆಸ್ ಗೂಂಡಾಗಿರಿ ಹಾಗೂ ದ್ವೇಷದ ರಾಜಕಾರಣದ ಮೂಲಕ ವಿರೋಧ ಪಕ್ಷವನ್ನ ಮೆಟ್ಟಿ ನಿಲ್ಲಬಹುದು ಅಂದುಕೊಂಡಿದೆ. ಸಿದ್ದರಾಮಯ್ಯರ ತಾತಾ ಮುತ್ತಾತನೂ ಈ ಕೆಲಸ ಮಾಡಿ ಯಶಸ್ವಿಯಾಗಿಲ್ಲ. ಸಂವಿಧಾನಿಕ ಸರ್ಕಾರ ಕೆಲಸ ಮಾಡಬೇಕು, ಅದು ಬಿಟ್ಟು ದ್ವೇಷ ರಾಜಕಾರಣ ಬೇಡ. ಈ ಸರ್ಕಾರ ಹೆಚ್ಚು ದಿನ ಬಾಳಲ್ಲ, ಉಳಿಯುವುದಿಲ್ಲ. ಅಧಿಕಾರಿಗಳಿಗೆ ಒತ್ತಡ ಮತ್ತು ಭಯದ ವಾತಾವರಣದ ಮೂಲಕ ನಿಯಂತ್ರಣ ಹೇರುತ್ತಿದೆ.

ಸಿದ್ದರಾಮಯ್ಯ ಸರ್ಕಾರ 20 ಸಾವಿರ ಕೋಟಿ ಟೆಂಡರ್ ವಾಪಾಸ್ ಪಡೆದಿದೆ. 80 ಶೇ. ಕಮಿಷನ್ ಗೆ ಡಿಮ್ಯಾಂಡ್ ಇಡಲು ಈ ರೀತಿ ಮಾಡಿದ್ದಾರೆ. ಕಾಮಗಾರಿ ಪ್ರಾರಂಭವಾದ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಪರ್ಸೆಂಟೇಜ್ ಗಾಗಿ ಕಾಮಗಾರಿ ನಿಲ್ಲಿಸಿದ್ದಾರೆ, ಇದು 80 ಶೇ ಪರ್ಸಂಟೇಜ್‌ ಸರ್ಕಾರ ಎಂದರು. ನಮ್ಮ ಸರ್ಕಾರದ ಯಾವುದೇ ವಿಚಾರ ತನಿಖೆ ಮಾಡಿ ನಾವು ಸಿದ್ದರಾಗಿದ್ದೇವೆ. ಅದರ ಜೊತೆಗೆ ಲೋಕಾಯುಕ್ತದ ಸಿದ್ದರಾಮಯ್ಯ ಕೇಸ್ ಕೂಡ ತನಿಖೆ ಆಗಲಿ. ನಮ್ಮ‌ ಕಾಲಘಟ್ಟದ ಯಾವುದು ಬೇಕಾದ್ರೂ ತನಿಖೆ‌ ಅಗಲಿ. ಆದರೆ 20 ಸಾವಿರ ಕೋಟಿ ಬಗ್ಗೆ ಬಹಿರಂಗ ಪಡಿಸಿ ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು