ಧರ್ಮಸ್ಥಳ: ಚುನಾವಣಾ ಪೂರ್ವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ಹಣ ಪಡೆದಿದ್ದಾರೆಂಬ ಆರೋಪದ ಬೆನ್ನಲ್ಲೇ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೆಡಿಎಸ್ ಪರಾಜಿತ ಅಭ್ಯರ್ಥಿ ನಾಪಂಡ ಮುತ್ತಪ್ಪ ಆಣೆ ಪ್ರಮಾಣ ಮಾಡಿದರು.
ಆಣೆ ಪ್ರಮಾಣ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಪಂಡ ಮುತ್ತಪ್ಪ ಅವರು ಕಾಂಗ್ರೆಸ್ ಹಾಗೂ ಬಿಜೆಪಿಗೆ ಆಹ್ವಾನ ನೀಡಿದ್ದರು.
ಕೊಟ್ಟ ಮಾತಿನಂತೆ ನಾಪಂಡ ಮುತ್ತಪ್ಪ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಆಣೆ ಪ್ರಮಾಣ ಮಾಡಿದರು.