News Kannada
Tuesday, September 26 2023
ಕ್ಯಾಂಪಸ್

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Parents' meeting of students of 1st PUC Commerce and Arts stream at Vivekananda PU College
Photo Credit : News Kannada

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ವತ್ಸಲಾ ರಾಜ್ಞಿ ಇವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಅತಿ ಮುಖ್ಯವಾದ ಘಟ್ಟ ಈ ವಯಸ್ಸು ಮಕ್ಕಳಿಗೆ ವರವೂ ಹೌದು ಶಾಪವೂ ಹೌದು. ಭವಿಷ್ಯದ ಕನಸುಗಳಿಗೆ ಈ ವಯಸ್ಸು ಅಡಿಪಾಯ ಅದೇ ರೀತಿ ಮಕ್ಕಳು‌ ದಾರಿ ತಪ್ಪುವ ಸಾಧ್ಯತೆಗಳು ಹೆಚ್ಚು ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯ ಅತಿ ಮುಖ್ಯ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಲೇಜಿನಲ್ಲಿರುವ ಎಲ್ಲಾ ಸವಲತ್ತುಗಳನ್ನು ಹಾಗೂ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆಗೈದು ಕಾಲೇಜಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರುವಂತವರಾಗಬೇಕು ಎಂದು ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಇವರು ಕಾಲೇಜಿನ ನೀತಿ ನಿಯಮಗಳ ಪರಿಚಯ ನೀಡಿದರು. ಕಾಲೇಜಿನ ವಸತಿನಿಲಯದ ನಿಯಮಗಳ ಬಗ್ಗೆ ಮುಖ್ಯ ನಿಲಯ‌ ಪಾಲಕರಾದ ಚೇತನ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋಪಾಲಕೃಷ್ಣ ಭಟ್, ಸದಸ್ಯರಾದ ಡಾ. ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅರುಣಾ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ದೀಪ್ತಿ ಹಾಗೂ ಶ್ರುತಿ ಪ್ರಾರ್ಥಿಸಿದರು. ಉಪನ್ಯಾಸಕಿ ಯಶವಂತಿ ವಂದಿಸಿದರು.

See also  ಬೆಂಗಳೂರು: ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮರಳಿ ಜೆಡಿಎಸ್‌ಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು