News Karnataka Kannada
Wednesday, April 24 2024
Cricket
ಮಂಗಳೂರು

ಹಿಂದುಗಳ ವಿರುದ್ಧ ಸೇಡಿನ ರಾಜಕಾರಣ ಆರಂಭವಾಗಿದೆ: ಕೋಟ ಶ್ರೀನಿವಾಸ ಪೂಜಾರಿ

Politics of revenge against Hindus has begun: Kota Srinivas Poojary
Photo Credit : News Kannada

ಮಂಗಳೂರು: ಡಿ.ಕೆ. ಶಿವಕುಮಾರ್‌ ಪೊಲೀಸರ ವಿರುದ್ಧ ನಿನ್ನೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರುವುದು ಕಂಡುಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ ಎಂದು ಹೇಳಿದರು.

ಇದು ಸರಿಯಲ್ಲ, ಅವರು ತಮ್ಮ ಮಾತನ್ನ ಪುನರ್ ಪರಿಶೀಲನೆ ಮಾಡಬೇಕು. ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸೋ ವಾತಾವರಣ ಕಂಡು ಬರುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ. ಅದನ್ನ ಪುನರ್ ಪರಿಶೀಲಿಸಲಿ ಎಂದರು.

ಸಿದ್ದರಾಮಯ್ಯ ಮತ್ತು ಡಿಕೆಶಿ ಶೇ 40 ಕಮಿಷನ್ ತನಿಖೆ ಮಾಡ್ತೀವಿ ಅಂದಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡುತ್ತೇನೆ. ಸಮಾಜ ಕಲ್ಯಾಣ, ಹಿಂದುಳಿದ ಇಲಾಖೆ ಮಂತ್ರಿಯಾಗಿದ್ದ ನನ್ನಿಂದಲೇ ತನಿಖೆ ಪ್ರಾರಂಭವಾಗಲಿ ಎಂದು ಸವಾಲು ಹಾಕಿದರು. ತನಿಖೆ ಮಾಡಲಿ, ಯಾವ ತನಿಖೆಯಲ್ಲಿ ಏನಾಗುತ್ತದೆ ನೋಡೋಣ. ವ್ಯಕ್ತಿಗತ ದ್ವೇಷಕ್ಕೆ ಅವಕಾಶ ಕೊಡಬಾರದು, ಆದರೂ ತನಿಖೆ ಮಾಡಲಿ. ಸಾಮಾನ್ಯವಾಗಿ ಹಿಂದುತ್ವದ ವಿಚಾರ ಅವರ ಗುರಿ ಇದೆ ಎಂಬುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದುಗಳಿಗೆ ಕಠಿಣ ದಿನವಾಗಲಿದೆ ಎಂದರು. ಓಲೈಕೆಗಾಗಿ ನೈತಿಕ ಪೊಲೀಸ್ ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ವಿರೋಧಿಸುವ ಕಾರ್ಯತಂತ್ರ ರೂಪುಗೊಂಡಿದೆ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು