News Kannada
Saturday, June 03 2023
ಮಂಗಳೂರು

ಪುತ್ತೂರು: ಬಿಜೆಪಿ ನಾಯಕರಿಂದ ಕಾರ್ಯಕರ್ತರನ್ನು ದಮನ ಸಹಿಸಲ್ಲ- ಶ್ರೀಕಾಂತ ಶೆಟ್ಟಿ

Puttur: Bjp leaders will not tolerate the suppression of party workers: Srikanth Shetty
Photo Credit : News Kannada

ಪುತ್ತೂರು: ಪುತ್ತೂರು ಅನೇಕ ಕಾರ್ಯಕರ್ತರಿಗೆ ಪ್ರೇರಣೆ ನೀಡುವ ಸ್ಥಳ. ಅದರೆ ಅದೇ ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರಂಭವಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದದ್ದೆ ತಡ ಪೊಲೀಸರ ಕಾರ್ಯ ವೈಖರಿ ಕೂಡ ಕಾಂಗ್ರೆಸ್‌ ರೀತಿಯಲ್ಲೇ ಇದೆ ಎನ್ನುವುದಕ್ಕೆ ಪುತ್ತೂರಿನ ಘಟನೆ ಸಾಕ್ಷಿ ಎಂದು ಹಿಂದು ಕಾರ್ಯಕರ್ತ ಶ್ರೀಕಾಂತ ಶೆಟ್ಟಿ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ತನ್ನ ಆಕ್ರೋಶ ಹೊರಹಾಕಿದ್ದಾರೆ. ಕರಾವಳಿ ಮುಂದಿನ ದಿನಗಳಲ್ಲಿ ಏನಾಗಬಹುದು ಎಂಬ ಆತಂಕ ಎದುರಾಗಿದೆ. ಈಗಾಗಲೇ ಸರ್ಕಾರ ಬದಲಾದ ಹಾಗೆಯೇ ಪೊಲಿಸರ ವರ್ತನೆ ಕೂಡ ಬದಲಾಗಿದೆ. ಮಾಜಿ ಮುಖ್ಯಮಂತ್ರಿಯಾಗಿದ್ದ ಡಿ.ವಿ. ಸದಾನಂದ ಗೌಡರ ಊರಲ್ಲೇ ಬ್ಯಾನರ್‌ ಕಟ್ಟಿದ ವಿಚಾರಕ್ಕೆ ಹಿಂದು ಯುವಕರ ಮೇಲೆ ಹಲ್ಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿ. ದೌರ್ಜನ್ಯ ವೆಸಗಿದ ಅಧಿಕಾರಿಗಳನ್ನು ಕೇವಲ ಅಮಾನತು ಮಾಡಿದರೆ ಸಾಲದು, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆಯಾಗಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಹೋರಾಟ ನಡೆಸಲಾಗುವುದು ಎಂದಿದ್ದಾರೆ.

ಇಲ್ಲಿ ಇರುವಂಥ ಅನೇಕ ಬಿಜೆಪಿ ನಾಯಕರು ಹಿಂದುತ್ವ, ಸಂಘ ಪರಿವಾರದ ಹೆಸರಿನಲ್ಲಿ ಬಿಜೆಪಿಯಲ್ಲಿ ಬೇರೆ ಬೇರೆ ಸ್ಥಾನಮಾನ ಪಡೆದಿದ್ದಾರೆ. ಆದರೆ ಈಗ ನಾವು ನಡೆದುಕೊಂಡು ಬಂದ ದಾರಿಯಲ್ಲಿ ಬೇರೆಯವರು ಅವಕಾಶ ಪಡೆಯುವ ಸಾಧ್ಯತೆಯಿದೆ ಎಂದು ಅಂಥ ಕಾರ್ಯಕರ್ತರನ್ನು ತುಳಿಯುವ, ಧಮನ ಮಾಡುವ ಕಾರ್ಯವನ್ನು ಬಿಜೆಪಿಯ ಕೆಲವು ನಾಯಕರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

See also  ಮಂಗಳೂರು: ಮತಾಂಧ ಶಕ್ತಿಗಳನ್ನು ಮಣಿಸುವ ಶಕ್ತಿ ಕೇಂದ್ರ ಮತ್ತು ರಾಜ್ಯ ಸರಕಾರಕ್ಕಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು