News Karnataka Kannada
Wednesday, April 24 2024
Cricket
ಮಂಗಳೂರು

ಪುತ್ತೂರು: ಬಿಜೆಪಿ ಪರ ಬೆಟ್ಟಿಂಗ್‌ ಕಟ್ಟಿ ಕೋಟ್ಯಂತರ ಕಳೆದುಕೊಂಡ ಕಥೆಯಿದು

Puttur: This is the story of losing crores of rupees by betting on behalf of the BJP.
Photo Credit : Freepik

ಪುತ್ತೂರು: ರಾಜ್ಯ ವಿಧಾನ ಸಭೆ ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದಿದೆ. ಆದರೆ ಪುತ್ತೂರಿನಲ್ಲಿ ಮಾತ್ರ ಫಲಿತಾಂಶ ಲೆಕ್ಕಾಚಾರದ ಕಾವು ಇನ್ನೂ ಆರಿಲ್ಲ. ಇದಕ್ಕೆ ಕಾರಣ ಚುನಾವಣೆ ಹೆಸರಲ್ಲಿ ನಡೆದ ಭಾರೀ ಮೊತ್ತದ ಬೆಟ್ಟಿಂಗ್‌.

ಈ ಬಾರಿ ಪುತ್ತೂರಿನಿಂದ ಬಿಜೆಪಿಯಿಂದ ಸೀಟ್‌ ಸಿಗದೆ ಬಂಡಾಯವಾಗಿ ಸ್ಪರ್ಧಿಸಿದ್ದ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ಪರವಾಗಿ ಬೆಟ್ಟಿಂಗ್‌ನಲ್ಲಿ ಹಣ ಕಟ್ಟಿದ್ದ ಕೆಲವರು ಕೋಟ್ಯಂತರ ರೂಪಾಯಿ ಕಳೆದುಕೊಂಡು ಚಿಂತೆಗೀಡು ಮಾಡುವಂತಾಗಿದೆ.

ಸ್ಥಳೀಯರ ಪ್ರಕಾರ, ಬಿಜೆಪಿ 3ನೇ ಸ್ಥಾನಕ್ಕೆ ಹೋಗಲಿದೆ ಎಂದು ಅರುಣ್‌ ಪುತ್ತಿಲ ಪರ ಇದ್ದವರು ಬೆಟ್ಟಿಂಗ್‌ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ 3ನೇ ಸ್ಥಾನಕ್ಕೆ ಹೋಗಲ್ಲ ಎಂದು ಬಿಜೆಪಿ ಅಭ್ಯರ್ಥಿ ಪರ ನಿಷ್ಠೆ ಇದ್ದವರು ಬೆಟ್ಟಿಂಗ್ ಕಟ್ಟಿದ್ದಾರೆ. ಡಿಸಿಸಿ ಬ್ಯಾಂಕಿನ ಪ್ರಮುಖ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಏಳು ಕೋಟಿ ರೂ. ಬೆಟ್ ಕಟ್ಟಿದ್ದು, ಹಣ ಕಳಕೊಂಡಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ. ಇನ್ನೊಬ್ಬರು ತಾಲೂಕು ಬಿಜೆಪಿ ಪದಾಧಿಕಾರಿಯೊಬ್ಬರು ಬಂಗಾರ ಅಡವಿಟ್ಟು 50 ಲಕ್ಷ ರೂಪಾಯಿ ಸುರಿದಿದ್ದು, ಅದನ್ನು ಕಳೆದುಕೊಂಡಿದ್ದಾರೆ. ಮತ್ತೊಬ್ಬರು ಪೆಟ್ರೋಲ್ ಪಂಪ್ ಮಾಡಲು ತೆಗೆದಿಟ್ಟಿದ್ದ 2.5 ಕೋಟಿ ರೂ. ಹಣವನ್ನು ಬೆಟ್ಟಿಂಗ್‌ ಕಟ್ಟಿ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಚುನಾವಣೆಗೆ ಎರಡು ದಿನ ಇರುವಾಗಲೇ ಬೆಟ್ಟಿಂಗ್ ನಡೆದಿತ್ತು. ಮತ ಎಣಿಕೆ ನಡೆಯುವ ಮುನ್ನಾ ದಿನ ಈ ಬೆಟ್ಟಿಂಗ್ ಭರಾಟೆ ಜೋರಾಗಿತ್ತು. ಬಿಜೆಪಿಯವರು ಅತಿ ಆತ್ಮವಿಶ್ವಾಸದಿಂದ ಅರುಣ್ ಪುತ್ತಿಲ ಪರವಾಗಿ 15 ಸಾವಿರಕ್ಕಿಂತ ಹೆಚ್ಚು ಮತ ಬೀಳಲ್ಲ ಎಂದು ಬೆಟ್ ಕಟ್ಟಿದ್ದರು. ಆದರೆ ಪುತ್ತಿಲ ಪರ ಇದ್ದವರು ಕಡಿಮೆ ರೇಟಲ್ಲಿ ಜೂಜಿನ ಸವಾಲು ಪಡೆದು ದೊಡ್ಡ ಮೊತ್ತದ ಹಣ ಪಡೆದಿದ್ದಾರೆ. ಪುತ್ತೂರಿನ ಕೆಲವು ಸಾಮಾನ್ಯ ಅಂಗಡಿ ವ್ಯಾಪಾರಸ್ಥರು, ತೆಂಗಿನಕಾಯಿ ವ್ಯಾಪಾರಿಗಳು ಈ ಬೆಟ್ಟಿಂಗಲ್ಲಿ ಭರ್ಜರಿ ಹಣ ಮಾಡಿದ್ದಾರೆ. ಒಟ್ಟಿನಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಬೆಟ್ಟಿಂಗ್‌ ವೀರರು ಹಣಕಟ್ಟಿ ಈಗ ಎಲ್ಲವನ್ನೂ ಕಳೆದುಕೊಂಡು ತೀವ್ರ ಸಂಕಷ್ಟ ಎದುರಿಸುವ ಪರಿಸ್ಥಿತಿಗೆ ತಂದೊಡ್ಡಿದ್ದಾರೆ ಎಂದು ಜನಸಾಮಾನ್ಯರು ಆಡಿಕೊಳ್ಳುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು