ಮಂಗಳೂರು: ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಅವರು ಹೊಂದಿರುವ ಅಪಾರ್ಟ್ಮೆಂಟ್ ಮತ್ತು ಲ್ಯಾಬ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡಿಡಿ ಆಗಿದ್ದ ನಿರಂಜನ್ ಇತ್ತೇಚೆಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ನಿರಂಜನ್ ಗೆ ಸೇರಿದ ಪಂಪ್ ವೆಲ್ ನಲ್ಲಿರೋ ಅಪಾರ್ಟ್ಮೆಂಟ್ ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ನಿರಂಜನ್ ಪತ್ನಿ ಒಡೆತನದ ಡಯಾಗ್ನಾಸ್ಟಿಕ್ ಲ್ಯಾಬ್ ನಲ್ಲಿ ತಲಾಶ್ ನಡೆದಿದೆ. ಅಲ್ಲದೆ ಕುಶಾಲನಗರ ಮತ್ತು ಪಿರಿಯಾಪಟ್ಟಣದ ಮನೆಯಲ್ಲೂ ಶೋಧ ಕಾರ್ಯ ಮುಂದುವರಿದಿದೆ.