ಬಂಟ್ವಾಳ: ನರಿಕೊಂಬು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರಗಿತು.
ಕಾರ್ಯಕ್ರಮದಲ್ಲಿ ಊರಿನ ಶಾಲಾ ಅಭಿಮಾನಿಗಳು ಪೋಷಕರು ಎಸ್ ಡಿ ಎಂ ಸಿ ಅಧ್ಯಕ್ಷರು ಸರ್ವ ಸದಸ್ಯರು ತಾಯಂದಿರ ಸಮಿತಿ ಅಧ್ಯಕ್ಷರು ಸದಸ್ಯರು ಮುಖ್ಯೋಪಾಧ್ಯಾಯರು ಶಾಲಾ ಶಿಕ್ಷಕರು ವಿದ್ಯಾರ್ಥಿ ಸಮೂಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆರಂಭದಲ್ಲಿ ಚಿಣ್ಣರ ಲೋಕ ಸೇವಾ ಟ್ರಸ್ಟ್ ಸಂಚಾಲಕ ಮೋಹನದಾಸ್ ಕೊಟ್ಟಾರಿ ಇವರ ಸಹಕಾರದಲ್ಲಿ ಚೆಂಡೆ ಮೇಳ,, ಬೊಂಬೆ ಕುಣಿತ ಶಾಲಾ ಬ್ಯಾಂಡ್ ತಂಡದೊಂದಿಗೆ ಮೆರವಣಿಗೆಯಲ್ಲಿ ಮಕ್ಕಳ ಸ್ವಾಗತ ಕಾರ್ಯಕ್ರಮ ನಡೆಯಿತು.
ಬಳಿಕ ನಡೆದ ಸೌಅ ಕಾರ್ಯಕ್ರಮದಲ್ಲಿ ದಾನಿಗಳಾದ ರಾಜೇಶ್ , ಲೋಕೇಶ್, ಶ್ರೀನಿವಾಸ ಪೂಜಾರಿ, ಶ್ರೀಮತಿ ಯಶೋಧ , ಸಂದೇಶ್ ಹಾಗೂ ಮಿಥುನ್ ಕೊಡುಗೆಯಾಗಿ ನೀಡಿದ ಕೊಡೆ , ಪೆನ್ಸಿಲ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ನಡೆಯುವ ವಾರ್ಷಿಕ ಕ್ರಿಯಾ ಯೋಜನೆ ಯ ಹಾಗೂ ಗುಣಾತ್ಮಕ ಶಿಕ್ಷಣ ನೀಡಲು ಶಾಲೆಯಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮುಖ್ಯೋಪಾಧ್ಯಾಯಿನಿ ಪ್ರೇಮಾ ಮಕ್ಕಳ ಪೋಷಕರಿಗೆ ಮನದಟ್ಟು ಮಾಡಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ರವಿ ಅಂಚನ್ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಉಷಾಲಾಕ್ಷಿ ಹಾಗೂ ಸದಸ್ಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.
ಶಿಕ್ಷಕಿ ಶೋಭ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಜಾತ ಸ್ವಾಗತ ಗೈದು ಶ್ರೀಮತಿ ವಿಲ್ಮಾ ವಂದಿಸಿದರು. ಹಿರಿಯ ವಿದ್ಯಾರ್ಥಿ ನರೇಂದ್ರ ರ ನೇತೃತ್ವದಲ್ಲಿ ಶಾಲೆಯನ್ನು ಅಲಂಕರಿಸಲಾಗಿತ್ತು.