News Karnataka Kannada
Thursday, April 25 2024
ಮಂಗಳೂರು

ಕರಾವಳಿಯಿಂದ ವಿಧಾನಭೆಗೆ ಆರು ಮಂದಿ ಹೊಸಬರು

Six newcomers from the coast to vidhanasabh
Photo Credit : Wikimedia

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಆಯ್ಕೆಯಾಗಿರುವ 13 ಜನಪ್ರತಿನಿಧಿಗಳಲ್ಲಿ ಆರು ಮಂದಿ ಹೊಸಬರು ಎಂಬುದು ಆಸಕ್ತಿಯ ಸಂಗತಿ.

ಉಡುಪಿ ಕ್ಷೇತ್ರದಿಂದ ಯಶ್‌ಪಾಲ್‌ ಎ. ಸುವರ್ಣ, ಕಾಪುವಿನಿಂದ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರಿನಿಂದ ಗುರುರಾಜ ಗಂಟಿಹೊಳೆ, ಕುಂದಾಪುರದಿಂದ ಕಿರಣ್‌ ಕೊಡ್ಗಿ, ಸುಳ್ಯದಿಂದ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರಿನಿಂದ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಶಾಸಕರಾಗಿ ವಿಧಾನಸೌಧ ಪ್ರವೇಶಿಸಲಿದ್ದಾರೆ.

ಕಿರಣ್‌ ಕೊಡ್ಗಿಯವರ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಯಶ್‌ಪಾಲ್‌ ಸುವರ್ಣ ಅವರ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಕೆ.ರಘುಪತಿ ಭಟ್‌ ಹಾಗೂ ಗುರ್ಮೆ ಸುರೇಶ್‌ ಶೆಟ್ಟಿ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಲಾಲಾಜಿ ಮೆಂಡನ್‌ ಅವರ ಶ್ರಮವೂ ಇದೆ. ಆದರೆ, ಗುರುರಾಜ ಗಂಟಿಹೊಳೆಯವರಿಗೆ ನಿರ್ಗಮಿತ ಶಾಸಕರ ಬೆಂಬಲ ಸಿಗದೇ ಇದ್ದರೂ ಕಾರ್ಯಕರ್ತರು, ಪರಿವಾರ ಸಂಘಟನೆಗಳ ಪ್ರಮುಖರು ಕೈಬಿಡಲಿಲ್ಲ.

ಯಶ್‌ಪಾಲ್‌ ಸುವರ್ಣ ಉಡುಪಿಯಿಂದ ಆಯ್ಕೆಯಾಗಿರುವ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ ಅವರು ಈ ಹಿಂದೆ ಉಡುಪಿ ನಗರಸಭೆಯೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಆದರೆ ಉಳಿದ ಮೂವರು ಜನಪ್ರತಿನಿಧಿಗಳಾಗಿರಲಿಲ್ಲ, ಪಕ್ಷದಲ್ಲಿ ಸಕ್ರಿಯರಾಗಿದ್ದರು.

ಕಿರಣ್‌ ಕೊಡ್ಗಿ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾಗಿದ್ದ ಕಿರಣ್‌ ಕೊಡ್ಗಿಯವರ ತಂದೆ ಎ.ಜಿ. ಕೊಡ್ಗಿಯವರು ಶಾಸಕರಾಗಿದ್ದರು.

ಗುರುರಾಜ ಗಂಟಿಹೊಳೆ ಗುರುರಾಜ ಗಂಟಿಹೊಳೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣವಧಿ ಪ್ರಚಾರಕರಾಗಿ 10 ವರ್ಷ ಸೇವೆ ಸಲ್ಲಿಸಿ, ಅನಂತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸುರೇಶ್‌ ಶೆಟ್ಟಿ ಸಮಾಜ ಸೇವಕರಾಗಿರುವ ಗುರ್ಮೆ ಸುರೇಶ್‌ ಶೆಟ್ಟಿಯವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ, ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಭಾಗೀರಥಿ ಮುರುಳ್ಯ ಮೀಸಲು ಕ್ಷೇತ್ರ ಸುಳ್ಯದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯಅವರು ಜಿ.ಪಂ. ಮಾಜಿ ಸದಸ್ಯೆ. ಪ್ರಥಮ ಬಾರಿಗೆ ಬಿಜೆಪಿಯಿಂದ ಸುಳ್ಯದಲ್ಲಿ ಮಹಿಳಾ ಅಭ್ಯರ್ಥಿಯಾಗಿ ಕಣಕ್ಕಿಳಿದವರು. ಪಿಯುಸಿ ವಿದ್ಯಾಭ್ಯಾಸ ಹೊಂದಿದ್ದು, ಹೈನುಗಾರಿಕೆ, ಟೈಲರಿಂಗ್‌ ವೃತ್ತಿಯನ್ನೂ ನಿರ್ವಹಿಸುತ್ತಿದ್ದಾರೆ.

ಅಶೋಕ್‌ ಕುಮಾರ್‌ ರೈ ಪುತ್ತೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಅವರು ಪುತ್ತೂರು ರೈ ಎಸ್ಟೇಟ್ಸ್‌ ಎಜುಕೇಶನ್‌ ಹಾಗೂ ಚಾರಿಟೆಬಲ್‌ ಟ್ರಸ್ಟ್‌ ಮುಖ್ಯಸ್ಥರು. ಟ್ರಸ್ಟ್‌ ಮೂಲಕ ಹತ್ತಾರು ಜನಪರ ಕಾರ್ಯ ನಡೆಸುತ್ತಿದ್ದಾರೆ. ಹಿಂದೆ ಬಿಜೆಪಿಯಲ್ಲಿದ್ದು ಕೆಲವು ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು