ಮೂಡುಬಿದಿರೆ: ಮೂಡುಬಿದಿರೆ ಪುರಸಭೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆಯಲ್ಲಿ ಸಿಹಾಬ್ ಎಂಬಾತ ತನ್ನ ಅಕ್ಕನ ಗಂಡ ಜಮಾಲ್ (ಬಾವ) ಎಂಬುವರನ್ನು ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ನಡೆದ ಮಾತಿನ ಚಕಮಕಿಯು ವಿಕೋಪಕ್ಕೇರಿ ಬಾವನಿಂದ ಪತ್ನಿಯ ಸಹೋದರ ಕೊಲೆಯಲ್ಲಿ ಅಂತ್ಯವಾಗಿದೆ. ಗಂಟಾಲ್ಕಟ್ಟೆ ನಿವಾಸಿ ಜಮಾಲ್ ಮೃತಪಟ್ಟವರು. ಅವರ ಬಾವ ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ.
ಇಬ್ಬರ ಮನೆಯೂ ಅಕ್ಕಪಕ್ಕದಲ್ಲಿದ್ದು ಮಕ್ಕಳ ವಿಷಯದಲ್ಲಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆಯಿತೆನ್ನಲಾಗಿದೆ. ಕೋಪದ ಭರದಲ್ಲಿ ಅಲ್ಲೇ ಇದ್ದ ಚಾಕುವಿನಲ್ಲಿ ಸುಹೈಬ್ ತನ್ನ ಬಾವ ಎಂದು ನೋಡದೆ ಜಮಾಲ್ ನ ಹೊಟ್ಟೆಗೆ ಇರಿದಿದ್ದು ತೀವ್ರವಾಗಿ ಗಾಯಗೊಂಡ ಜಮಾಲ್ ಕೊನೆಯುಸಿರೆಳೆದಿದ್ದಾರೆ. ಆರೋಪಿ ಸುಹೈಲ್ ನನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ