News Karnataka Kannada
Thursday, April 25 2024
ಮಂಗಳೂರು

ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಆರ್ಥಿಕತೆ – ಗಾಯತ್ರಿ ರಾವ್

Strengthened economy with regular tax payments: Gayathri Rao
Photo Credit : News Kannada

ಉಜಿರೆ: ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಗಾಯತ್ರಿ ರಾವ್ ತಿಳಿಸಿದರು.

ಅವರು ಇತ್ತೀಚೆಗೆ ಶ್ರೀ.ಧ.ಮ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗ ಅಯೋಜಿಸಿದ ‘ತೆರಿಗೆಯ ಮೂಲಭೂತ ಅಂಶಗಳು’ ಎಂಬ ಅತಿಥಿ ಉಪನ್ಯಾಸ ಕಾರ್ಯ ಕ್ರಮದಲ್ಲಿ ಮಾತನಾಡುತಿದ್ದರು.

“ಚಾಣಕ್ಯ ನೀತಿಯಲ್ಲಿರುವ ಹಾಗೆ ತೆರಿಗೆ ಎಂದರೆ ಜೇನು ಹೂವಿನಿಂದ ಮಕರಂದವನ್ನು ಹೀರಿ ಹೇಗೆ ಜೇನು ತುಪ್ಪವನ್ನು ಕೊಡುತ್ತದೊ ಅದೇ ರೀತಿ ಸರಕಾರವು ಜನರಿಂದ ತೆರಿಗೆಯನ್ನು ಸಂಗ್ರಹಿಸಿ ಜನರಿಗೆ ಉಪಯೋಗವಾಗುವಂತ ಕೆಲಸಗಳನ್ನು ಮಾಡಬೇಕು” ಎಂದು ಹೇಳಿದರು.

ತೆರಿಗೆ ಪಾವತಿಯ ಬಗ್ಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ತಿಳಿದುಕೊಂಡು ಸಮಯಕ್ಕೆ ಸರಿಯಾಗಿ ಪಾವತಿಸಿದರೆ ಆರ್ಥಿಕತೆ ಬಲಗೊಳ್ಳುವುದಲ್ಲದೆ ಸಾಮಾಜಿಕ ನ್ಯಾಯವನ್ನು ಕೂಡ ಖಚಿತಪಡಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು. ವಿಭಾಗ ವರಿಷ್ಠ ಗಣರಾಜ್ ಕೆ, ಪ್ರಧ್ಯಾಪಕರಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಷಾ ಜಿ ಶೆಟ್ಟಿ ಸ್ವಾಗತಿಸಿ, ಪೂರ್ವಿತ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು