News Karnataka Kannada
Saturday, April 20 2024
Cricket
ಮಂಗಳೂರು

ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು ಹಿನ್ನಲೆ ಸುಳ್ಯ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಭೆ

Sullia BJP workers meet to felicitate party workers on Bhagirathi Murulya's landslide victory
Photo Credit : News Kannada

ಸುಳ್ಯ: ಸುಳ್ಯ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರಿಗೆ ಅಭಿನಂದನಾ ಸಭೆ ಸುಳ್ಯದ ಬೂಡು ಕೇರ್ಪಳ ಬಂಟರ ಭವನದಲ್ಲಿ ಮಂಗಳವಾರ ನಡೆಯಿತು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದ ಭಾಗೀರಥಿ ಮುರುಳ್ಯ ಅವರು ಬಾರೀ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸುಳ್ಯ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತು ಪಡಿಸಲಾಗಿದೆ ಎಂದರು.

ಸುಳ್ಯದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಎಸ್.ಅಂಗಾರ ಅವರ ಸಜ್ಜನ ರಾಜಕಾರಣ, ಅಭಿವೃದ್ಧಿ ಗೆಲುವಿಗೆ ಕಾರಣವಾಗಿದೆ. ರಾಜ್ಯದ ಸೋಲಿನಿಂದ ಕಾರ್ಯಕರ್ತರು ವಿಚಲಿತರಾಗುವುದು ಬೇಡ. ಮುಂದೆ ಬಿಜೆಪಿ ವಿರೋಧ ಪಕ್ಷವಾಗಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸಿ ಅಭಿವೃದ್ಧಿಗೆ ಕೈಜೋಡಿಸಲಿದೆ. ಸುಳ್ಯದಲ್ಲಿ ಸಾಮಾನ್ಯ ಕುಟುಂಬದಿಂದ ಬಂದ ಮಹಿಳೆ ವಿಧಾನ ಸಭೆ ಪ್ರವೇಶಿಸುತ್ತಿರುವುದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ, ಸುಳ್ಯದಲ್ಲಿ ಸತತ ಏಳು ಅವಧಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವ ಮೂಲಕ ಸುಳ್ಯ ಬಿಜೆಪಿಯ ಕ್ಷೇತ್ರ, ಬಿಜೆಪಿಯ ಭದ್ರಕೋಟೆ ಎಂದಾಗಿದೆ ಎಂದರು.

ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಪ್ರಮುಖರಾದ ರಾಧಾಕೃಷ್ಣ ಬೂಡಿಯೂರು, ಆಶಾ ತಿಮ್ಮಪ್ಪ, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ಸುಭೋದ್ ಶೆಟ್ಟಿ ಮೇನಾಲ, ಎಸ್.ಎನ್.ಮನ್ಮಥ, ಗುರುದತ್ ನಾಯಕ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎ.ವಿ.ತೀರ್ಥರಾಮ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

ವಿನಯಕುಮಾರ್ ಕಂದಡ್ಕ ವಂದೇ ಮಾತಂ ಹಾಡಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಸುಭೋದ್ ಶೆಟ್ಟಿ ಮೇನಾಲ ವಂದಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು, ಮುಖಂಡರು, ವಿವಿಧ ಪದಾಧಿಕಾರಿಗಳು, ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಕರ‍್ಯದರ್ಶಿಗಳಿಗೆ ಶಾಲು ಹಾಕಿ ಗೌರವಿಸುವ ಮೂಲಕ ಸುಳ್ಯ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನೂ ಹಲವರು ಅಭಿನಂದಿಸಿ, ಗೌರವಿಸಿ, ಸನ್ಮಾನಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು