News Karnataka Kannada
Friday, March 29 2024
Cricket
ಮಂಗಳೂರು

ಸುಳ್ಯ: ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ

MLA Bhagirathi meets youth who have been subjected to police brutality
Photo Credit : News Kannada

ಸುಳ್ಯ: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ.‌ ಹಿಂದುಗಳ ಪರವಾಗಿ ವಿಧಾನಸೌಧದಲ್ಲಿ ಧ್ವನಿ ಎತ್ತಲು ನಾನು ಸಿದ್ಧಳಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಘಟನೆಯ ಬಗ್ಗೆ ಅವರು ಹಿಂದು ಮುಖಂಡ ಅರುಣ್‌ ಕುಮಾರ್ ಪುತ್ತಿಲ ಅವರಿಂದ ಮಾಹಿತಿ ಪಡೆದರು. ಅವರೊಂದಿಗೆ ಸುಳ್ಯದ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಇಂದಿರಾ ಬಿ.ಕೆ ಬಂಬಿಲ, ಸುಳ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಸುನೀಲ್ ಕೇರ್ಪಳ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ರೈ ಮೇನಾಲ, ಸುಳ್ಯ ನಗರಸಭಾ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ. ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಅವರೊಂದಿಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು