ಬಂಟ್ವಾಳ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6ರಂದು ಸಂಜೆ 4ಕ್ಕೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರ ಪರ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.
ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಗಿ ಕಾರ್ಯಕ್ರಮದ ದೃಷ್ಟಿಯಿಂದ ಈಗಾಗಲೇ ಪಕ್ಷದ ವತಿಯಿಂದ 59 ಗ್ರಾಮಗಳ ಎಲ್ಲಾ ಬೂತ್ಗಳಲ್ಲೂ ಸಭೆಗಳನ್ನು ನಡೆಸಲಾಗಿದ್ದು, ಪ್ರತಿ ಬೂತ್ನಿಂದ ಕನಿಷ್ಠ 100 ಮಂದಿ ಭಾಗವಹಿಸಲಿದ್ದಾರೆ.
ಸಂಜೆ 4ರ ಸುಮಾರಿಗೆ ಬಂಟ್ವಾಳ ವಿದ್ಯಾಗಿರಿ ಎಸ್ವಿಎಸ್ ಕಾಲೇಜಿನ ಬಳಿಯ ಹೆಲಿಪ್ಯಾಡ್ಗೆ ಆಗಮಿಸಲಿದ್ದು, ಬಿ.ಸಿ.ರೋಡಿನ ಕೈಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ರೋಡ್ ಶೋ ನಡೆಸಲಿರುವ ಯೋಗಿ ಅವರು ಬಳಿಕ ರೋಡ್ ಶೋ ವಾಹನದಲ್ಲೇ ನಿಂತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲು, ಅಭ್ಯರ್ಥಿ ರಾಜೇಶ್ ನಾೖಕ್ ಸೇರಿದಂತೆ ಮೊದಲಾದ ಪ್ರಮುಖರು ಪಾಲ್ಗೊಳ್ಳುತ್ತಾರೆ.
ರವೀಶ್ ಶೆಟ್ಟಿ ಕರ್ಕಳ, ಎ.ಗೋವಿಂದ ಪ್ರಭು, ಹರಿದಾಸ್, ಚಿದಾನಂದ ರೈ ಕಕ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ಕಿಶೋರ್ ಪಲ್ಲಿಪಾಡಿ ಪತ್ರಿಕಾಗೋಷ್ಠಿಯಲ್ಲಿದ್ದರು.