News Karnataka Kannada
Thursday, April 25 2024
ಮಂಗಳೂರು

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾಲೋಚನಾ ಸಭೆ

Surathkal Block Congress Committee to hold workers' consultation meeting
Photo Credit : News Kannada

ಸುರತ್ಕಲ್: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. “ಮತೀಯ ದ್ವೇಷದ ಕಾರಣ ಹತ್ಯೆಗೀಡಾದ ಅಮಾಯಕರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಹಾಗೂ ಪರಿಹಾರ ನೀಡುವಲ್ಲಿ ಹಿಂದಿನ ಬಿಜೆಪಿ ಸರಕಾರ ಮಾಡಿರುವ ತಾರತಮ್ಯ ಧೋರಣೆಯ ಬಗ್ಗೆ ಸೂಕ್ತ ಕ್ರಮಕೈಗೊಂಡು ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಹಾಗೂ ಉಪ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.

“ದೀಪಕ್ ರಾವ್, ಶರತ್ ಮಡಿವಾಳ, ಪ್ರವೀಣ್ ನೆಟ್ಟಾರ್, ಮಸೂದ್, ಫಾಝಿಲ್, ಜಲೀಲ್ ಕೃಷ್ಣಾಪುರ, ದಿನೇಶ್ ಕನ್ಯಾಡಿ ಸಹಿತ ಮತೀಯ ದ್ವೇಷದ ಕಾರಣ ನಡೆದ ಅಮಾಯಕರ ಹತ್ಯೆಯ ಆರೋಪಿಗಳಿಗೆ ಮಾತ್ರವಲ್ಲ ಅದರೊಂದಿಗೆ ಇಂತಹ ಅಮಾನವೀಯ ಕೃತ್ಯದ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವಂತೆಯೂ ಸರಕಾರಕ್ಕೆ ಒತ್ತಾಯ ಮಾಡುತ್ತೇನೆಂದು ಇನಾಯತ್ ಅಲಿ ತಿಳಿಸಿದರು.

ಕರಾವಳಿ ಭಾಗದಲ್ಲಿ ನಡೆದಿರುವ ಎಲ್ಲಾ ಕೋಮು ಪ್ರಕರಣಗಳ ತನಿಖೆಯಾಗಬೇಕು ಮತ್ತು ಮುಂದೆ ಸಮಾಜಘಾತುಕ ಶಕ್ತಿಗಳು ತಲೆ ಎತ್ತದಂತೆ ಬಿಗಿಯಾದ ಕಾನೂನು ವ್ಯವಸ್ಥೆ ಜಾರಿಯಾಗಬೇಕು ಎಂದೂ ಹೇಳಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಉಮೇಶ್ ದಂಡಕೇರಿ, ಮುಖಂಡರಾದ ಸದಾಶಿವ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ಹರಿನಾಥ್, ಬಶೀರ್ ಬೈಕಂಪಾಡಿ, ಗುಲ್ಝಾರ್ ಬಾನು ಮತ್ತಿತ್ತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು