News Karnataka Kannada
Friday, April 19 2024
Cricket
ಮಂಗಳೂರು

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

The decomposed body of an unidentified man was found in a public drinking water tank in Kayarthadka
Photo Credit : News Kannada

ಬೆಳ್ತಂಗಡಿ: ಇಲ್ಲಿಯ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ.

ಇಂದು ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಜನರು ಪಂಚಾಯತು ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳೀಯರು ಹೋಗಿ ಟ್ಯಾಂಕ್‌ನ ಒಳಗೆ ನೋಡಿದಾಗ ಅಪರಿಚಿತ ಗಂಡಸಿನ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ.

ಶವ ಕೊಳೆತು ಹೋಗಿದ್ದು, ಸುಮಾರು ನಾಲ್ಕು ದಿನಗಳ ಹಿಂದೆ ಈತ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಿಸಲಾಗಿದ್ದು, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು