News Kannada
ಮಂಗಳೂರು

ಸ್ಪೀಕರ್‌ ಸ್ಥಾನ ಉತ್ಸವ ಮೂರ್ತಿ ಅಲ್ಲ, ಅದು ಪೀಠದ ಸಮಸ್ಯೆ ‌ಅಲ್ಲ, ಪೀಠದಲ್ಲಿ ಕೂರುವವರ ಸಮಸ್ಯೆ

The speaker's seat is not a utsava murthy, it is not the problem of the chair, it is the problem of those who sit on the chair.
Photo Credit : Facebook

ಮಂಗಳೂರು: ನಾನು ಸಭಾಧ್ಯಕ್ಷ ಸ್ಥಾನದಲ್ಲಿದ್ದರೂ ಉಳ್ಳಾಲ ಕ್ಷೇತ್ರದಲ್ಲಿ ಜನಸೇವೆ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಜನರ, ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಇರಲಿದೆ. ಈ ಸ್ಥಾನ ನನ್ನ ಸೇವೆಗೆ ಅಡ್ಡಿ ಬರುವುದಿಲ್ಲ. ಈ ಹಂತಕ್ಕೆ ಬರಲು ಎಲ್ಲರ ಸಹಕಾರ, ಮಾರ್ಗದರ್ಶನ ಕಾರಣ. ಸಭಾಧ್ಯಕ್ಷ ಸ್ಥಾನ ಗೌರವದ ಮತ್ತು ಸಂವಿಧಾನಾತ್ಮಕ ಸ್ಥಾನ. ಸ್ಥಾನದ ಗೌರವ ಉಳಿಸಿಕೊಂಡು ಜಿಲ್ಲೆಗೆ ಮತ್ತು ಕ್ಷೇತ್ರಕ್ಕೆ ಗೌರವ ತರುತ್ತೇನೆ.

ವಿಧಾನಸಭೆಯಲ್ಲಿ ದ್ವೇಷ, ಆವೇಶ ಇಲ್ಲದೇ ಸದಸ್ಯರ ಜೊತೆ ಇರಬೇಕು. ಸಭಾಧ್ಯಕ್ಷ ಸ್ಥಾನದಲ್ಲಿ ಜನರ ಜೊತೆ ಒಡನಾಟದ ಜೊತೆ ಸ್ಥಾನದ ಘನತೆ ಕೂಡ ಉಳಿಸಬೇಕಿದೆ. ಈ ಹೊತ್ತಲ್ಲಿ‌ ಕ್ಷೇತ್ರದ ಜನತೆ ಕೂಡ ನನಗೆ ಬೆಂಬಲ ಕೊಡ್ತಾರೆ ಅನ್ನೋ ವಿಶ್ವಾಸವಿದೆ. ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಮಂತ್ರಿ ಸ್ಥಾನದ ಬಗ್ಗೆ ಹೆಚ್ಚು ತಿಳುವಳಿಕೆ ಇದೆ. ಆದರೆ ಸಭಾಧ್ಯಕ್ಷ ಸ್ಥಾನದ ಬಗ್ಗೆ ಹೆಚ್ಚಿನವರಿಗೆ ಗೊತ್ತಿರಲ್ಲಇದರಿಂದ ನಾನು ಅವರ ಕೈಗೆ ಸಿಗಲ್ಲ ಎಂಬ ಪ್ರೀತಿಯ ಆತಂಕ ಇದೆ. ಆದರೆ ಕೆಲವೇ ತಿಂಗಳುಗಳಲ್ಲಿ ಈ ಬಗ್ಗೆ ಅವರಿಗೆ ಅರಿವಾಗಲಿದೆ. ಪಕ್ಷದ ಹೈಕಮಾಂಡ್ ತೀರ್ಮಾನ ಇದು, ಅದಕ್ಕೆ ನಾನು‌ ಬದ್ದ.

ವಯಸ್ಸಿನಲ್ಲಿ ನಾನು ಕಿರಿಯ, ಆದರೆ ಅನುಭವದಲ್ಲಿ ‌ನಾನು ಹಿರಿಯ. ನಾನು ಮಂತ್ರಿಯಾಗಿದ್ದರೆ ಒಂದು ಇಲಾಖೆಗೆ ಮಾತ್ರ ಮಂತ್ರಿ. ಈಗ ಎಲ್ಲಾ ಇಲಾಖೆಯ ಮಂತ್ರಿಗಳು ಕೂಡ ನನ್ನ ವ್ಯಾಪ್ತಿಗೆ ಬರುತ್ತಾರೆ. ಆ ಮೂಲಕ ನಾನು ಕೆಲಸ ಮಾಡಿಸುವುದನ್ನು ಮಾಡುತ್ತೇನೆ. ಹಿಜಾಬ್ ನಿಷೇಧ ಸೇರಿ ಅನೇಕ ವಿಚಾರಗಳ ಬಗ್ಗೆ ಸರ್ಕಾರದ ನಿಲುವು ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಸಂವಿಧಾನಬದ್ದ ವಿಷಯಗಳು ಸುಪ್ರೀಂ ಕೋರ್ಟ್ ನಲ್ಲಿ ಇದೆ. ಸಂವಿಧಾನಕ್ಕೆ ವಿರುದ್ದವಾಗಿ ಸರ್ಕಾರ ಕೆಲಸ ಮಾಡುವುದಿಲ್ಲ. ಸಭಾಧ್ಯಕ್ಷನಾದ ಹಿನ್ನೆಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದೇನೆ.

ಹೀಗಾಗಿ ನನ್ನ ವ್ಯಾಪ್ತಿಯಲ್ಲಿ ಸಂವಿಧಾನ ಬದ್ದವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತೇನೆ. ಸಭಾಧ್ಯಕ್ಷ ಸ್ಥಾನ ಉತ್ಸವ ಮೂರ್ತಿ ಅಲ್ಲ, ಅದು ಪೀಠದ ಸಮಸ್ಯೆ ‌ಅಲ್ಲ. ಪೀಠದಲ್ಲಿ ಕೂರುವವರ ಸಮಸ್ಯೆ, ಕೂತವರು ಸರಿ ಇದ್ರೆ ಎಲ್ಲಾ ಸರಿ ಇರುತ್ತದೆ. ಪ್ರೋಟೊಕಾಲ್ ಅಂತ ಏನಿಲ್ಲ, ಜನರ ಪ್ರೀತಿಯೇ ಪ್ರೋಟೋಕಾಲ್. ಅಧಿಕಾರಿಗಳಿಗೂ ಈ ಬಗ್ಗೆ ಸೂಚನೆ ಕೊಟ್ಟಿದ್ದೇನೆ. ಸಾಮಾನ್ಯ ಜನರು ನನ್ನನ್ನು ತಲುಪಲು ಅವಕಾಶ ಕೊಡಿ ಅಂತ ಸೂಚಿಸಿದ್ದೇನೆ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. 70 ಶಾಸಕರಿಗೆ ತರಬೇತಿ ಕಾರ್ಯಾಗಾರ ಮಾಡುವ ಯೋಜನೆ ಇದೆ
ವಿಧಾನಸಭೆಯ ಕಾರ್ಯವೈಖರಿ, ಜನ ಸಾಮಾನ್ಯರ ಜತೆಗಿನ ಸಂಪರ್ಕದ ಬಗ್ಗೆ ಮೂರು ದಿನ ತರಬೇತಿ ಕಾರ್ಯಾಗಾರ ಮಾಡುತ್ತೇವೆ ಎಂದರು.

See also  ಮೈಸೂರಿನಲ್ಲಿ ಮನೆದರೋಡೆ ಮಾಡಿದ್ದ ಆರೋಪಿಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು