News Karnataka Kannada
Thursday, April 25 2024
ಮಂಗಳೂರು

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಿದ್ದು ಬಿಜೆಪಿಯವರೆಂದು ಇಡೀ ಜಗತ್ತಿಗೆ ಗೊತ್ತಿದೆ: ಅಶೋಕ್‌ ರೈ

The whole world knows that it was the BJP that carried out the atrocities in Puttur: Ashok Rai
Photo Credit : News Kannada

ಪುತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ, ಬಂದ ಕೂಡಲೇ ಕೊಡುತ್ತೇನೆ. ಬಿಜೆಪಿಯವರು ಈ ಕೃತ್ಯ ನಡೆಸಿದ್ದಾರೆಂದು ನೋವು ಅನುಭವಿಸಿದ ಅಮಾಯಕರಿಗೆ ಗೊತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ್ದಾರೆ. ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಹಂತ ಹಂತವಾಗಿ ಎಲ್ಲಾ ಇಲಾಖೆಗಳ ಬಗ್ಗೆ ತಿಳಿಯುವ ಪ್ರಯತ್ನ ಮಾಡುತ್ತೇನೆ, ಆಳವಾಗಿ ಸಾಧಕ-ಬಾಧಕಗಳನ್ನು ತಿಳಿಯುವ ಪ್ರಯತ್ನ ಮಾಡಲಾಗುವುದು, ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೊದಲು ಸಾಧಕ ಬಾಧಕಗಳ ಬಗ್ಗೆ ಅರಿತುಕೊಳ್ಳಬೇಕು ಎಂದು ಹೇಳಿದರು. ಸುಳ್ಯ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು ಯಾರೇ ಆಗಲಿ, ಇನ್ನೊಬ್ಬನ ತಂದೆ ತಾಯಿಗೆ ಬೈಯುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು