ಪುತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ, ಬಂದ ಕೂಡಲೇ ಕೊಡುತ್ತೇನೆ. ಬಿಜೆಪಿಯವರು ಈ ಕೃತ್ಯ ನಡೆಸಿದ್ದಾರೆಂದು ನೋವು ಅನುಭವಿಸಿದ ಅಮಾಯಕರಿಗೆ ಗೊತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ್ದಾರೆ. ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಹಂತ ಹಂತವಾಗಿ ಎಲ್ಲಾ ಇಲಾಖೆಗಳ ಬಗ್ಗೆ ತಿಳಿಯುವ ಪ್ರಯತ್ನ ಮಾಡುತ್ತೇನೆ, ಆಳವಾಗಿ ಸಾಧಕ-ಬಾಧಕಗಳನ್ನು ತಿಳಿಯುವ ಪ್ರಯತ್ನ ಮಾಡಲಾಗುವುದು, ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೊದಲು ಸಾಧಕ ಬಾಧಕಗಳ ಬಗ್ಗೆ ಅರಿತುಕೊಳ್ಳಬೇಕು ಎಂದು ಹೇಳಿದರು. ಸುಳ್ಯ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು ಯಾರೇ ಆಗಲಿ, ಇನ್ನೊಬ್ಬನ ತಂದೆ ತಾಯಿಗೆ ಬೈಯುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದರು.