News Karnataka Kannada
Saturday, April 20 2024
Cricket
ಮನರಂಜನೆ

ಮಂಗಳೂರು: “ಪಿರ್ಕಿಲು” ತುಳು ಸಿನಿಮಾ ತೆರೆಗೆ

Tulu movie "Pirkilu" to hit the screens
Photo Credit : News Kannada

ಮಂಗಳೂರು: “ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಞಾವು ನಿರ್ಮಾಣದಲ್ಲಿ ಹೆಚ್.ಡಿ ಆರ್ಯ ನಿರ್ದೇಶನದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾದ ಬಿಡುಗಡೆ ಸಮಾರಂಭ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ತುಳು ಸಿನಿಮಾಗಳಿಗೆ ಪ್ರೇಕ್ಷಕರ ಪ್ರೋತ್ಸಾಹ ಎಷ್ಟು ಮುಖ್ಯವೋ, ಸಿನಿಮಾಗಳಲ್ಲಿ ನಟಿಸಿರುವ ಕಲಾವಿದರ ಪ್ರೋತ್ಸಾಹ ಸಹಕಾರವೂ ಅಷ್ಟೇ ಮುಖ್ಯ. ಸಿನಿಮಾಗಳಲ್ಲಿ ಅಭಿನಯಿಸಿದ ಕಲಾವಿದರು ಸಿನಿಮಾ ಬಿಡುಗಡೆಯ ಸಂದರ್ಭದಲ್ಲೂ ನಿರ್ಮಾಪಕರೊಂದಿಗೆ ಪ್ರಚಾರ ಸಂದರ್ಭದಲ್ಲಿ ಸಹಕರಿಸಿದರೆ ಒಳ್ಳೆಯದು ಎಂದವರು ತಿಳಿಸಿದರು.

ನಿರ್ಮಾಪಕ ಪಮ್ಮಿ ಕೊಡಿಯಾಲ್ ಬೈಲ್, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ನಿರ್ದೇಶಕ ಹೆಚ್ ಡಿ ಆರ್ಯ, ನಿರ್ಮಾಪಕರಾದ ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಜಾವು, ಲತಾ ಶೆಟ್ಟಿ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ‌ ನಿರ್ವಹಿಸಿದರು.

ಪಿರ್ಕಿಲು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಬಾರತ್ ಸಿನಿಮಾಸ್, ಐನಾಕ್ಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾ, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್ ಸಿನಿಮಾ, ಮೂಡಬಿದ್ರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಸುಳ್ಯದಲ್ಲಿ ಸಂತೋಷ್ ಬೆಳ್ತಂಗಡಿಯಲ್ಲಿ ಭಾರತ್ ಸಿನಿಮಾ ಮೊದಲಾದ ಕಡೆಗಳಲ್ಲಿ ತೆರೆಕಂಡಿದೆ.

“ಪಿರ್ಕಿಲು ಸಿನಿಮಾಕ್ಕೆ ಮೂರು ಹಂತದಲ್ಲಿ ಸುಳ್ಯ, ಪುತ್ತೂರು, ಮಂಗಳೂರು, ಉಪ್ಪಿನಂಗಡಿಯಲ್ಲಿ 29 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಪಿರ್ಕಿಲು ತುಳು ಸಿನಿಮಾ ಹಾಸ್ಯ ಮತ್ತು ಕೌಟುಂಬಿಕ ಮನರಂಜನೆಯ ಚಿತ್ರ. ಎಲ್ಲಾ ವರ್ಗದ ಜನರು ಇಷ್ಟ ಪಡುವ ಕತೆಯನ್ನು ಹಾಸ್ಯಭರಿತವಾಗಿ ಹೆಣೆಯಲಾಗಿದೆ. ನಿರ್ದೇಶಕ ಹೆಚ್.ಡಿ. ಆರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಬಬಿತ ತುಳು ಸಂಭಾಷಣೆ ತರ್ಜುಮೆಯನ್ನು ಮಾಡಿದ್ದಾರೆ.

ತಾರಾ ಬಳಗದಲ್ಲಿ ಖ್ಯಾತ ನಾಮರಾದ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ನವರಸ ರಾಜ ಬೋಜರಾಜ ವಾಮಂಜೂರು, ದೀಪಕ್ ರೈ ಪಾಣಾಜೆ, ರವಿ ರಾಮಕುಂಜ ಪ್ರಮುಖ ಪಾತ್ರದಲ್ಲಿದ್ದಾರೆ. ನಾಯಕ ನಟರಾಗಿ ವರ್ಧನ್ ಮತ್ತು ಸುದೇಶ್, ನಾಯಕಿಯಾಗಿ ಸಲೋಮಿ ಡಿ.ಸೋಜ, ಲತಾ ಅಭಿನಯಿಸಿದ್ದಾರೆ” ಎಂದರು.

ತಾರಾಗಣದಲ್ಲಿ ಸುಮಿತ್ರ ರೈ, ಅಮಿತ, ನವೀನ್ ಬೋಂದೇಲ್, ಅರ್ಪಣ್, ಅನಿಲ್ ರೈ, ರಂಜಿತ್ ರೈ, ತಿಮ್ಮಪ್ಪ ಕುಲಾಲ್,
ಪ್ರಭಾಕರ ಶೆಟ್ಟಿ, ಮೊಹನ್, ಸೋನಿ ಮೊದಲಾದವರಿದ್ದಾರೆ.

ತಂತ್ರಜ್ಞರು
ವಸ್ತ್ರಾಲಂಕಾರ -ಲತಾ, ನಿರ್ದೇಶನ ತಂಡ – ದೀಪು, ಆರಾಧ್ಯ, ಛಾಯಾಗ್ರಹಣ ಸಹಾಯ – ಕೀರ್ತಿ, ಮೇಕಪ್ – ದಿಶಾ, ದಿಲೀಪ್, ಸಂಕಲನ – ಎ.ಆರ್ ಕೃಷ್ಣ, ಅಭಿಷೇಕ್ ರಾವ್, ಸಂಗೀತ – ವಿ ಮನೋಹರ, ಸಾಹಿತ್ಯ- ಶ್ರೀಧರ್ ಕರ್ಕೇರ, ವಿ. ಮನೋಹರ್, ಛಾಯಾಗ್ರಹಣ – ಎ. ಆರ್ ಕೃಷ್ಣ, ನಿರ್ಮಾಪಕರು – ಸತೀಶ್ ಪೆರ್ನೆ, ಶಿವಪುಸಾದ್ ಇಜ್ಜಾವು ತುಳು ಸಂಭಾಷಣೆ ಸಹಾಯ ಮತ್ತು ತರ್ಜಿಮೆ – ಬಬಿತ, ಕಥೆ ಚಿತ್ರಕಥೆ, ಸಂಭಾಷಣೆ, ನಿರ್ದೇಶನ – ಹೆಚ್.ಡಿ ಆರ್ಯ

ಕಥೆಯ ಸಾರಾಂಶ
ಅಂದ ಚೆಂದದ ಹಾಸ್ಯ ಮತ್ತು ಕೌಟುಂಬಿಕ ಕಥಾ ಹಂತರವಿರುವ ಚಿತ್ರ ಪಿರ್ಕಿಲು. ಪಿರ್ಕಿಲು ಎಂದು ಊರಿನ ಜನರಿಂದ ಕರೆಸಿಕೊಳ್ಳುವ ಹುಡುಗರು ಏನೆಲ್ಲ ಅವಾಂತರಗಳನ್ನು ಸೃಷ್ಟಿ ಮಾಡುತ್ತಾರೆ. ಎಂಬುದನ್ನು ಹಾಸ್ಯಭರಿತವಾಗಿ ಸಂದೇಶ ಸಾರುವುದೇ ಚಿತ್ರದ ಒನ್ ಲೈನ್ ಸ್ಟೋರಿ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು