ಉಳ್ಳಾಲ: ಯುವತಿಯೊಬ್ಬಳಿಗೆ ಅಪರಿಚಿತ ಯುವಕ ನೊಬ್ಬ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಭಗವತೀ ದೇವಸ್ಥಾನ ಬಳಿ ಶುಕ್ರವಾರ ತಡರಾತ್ರಿ ನಡೆದಿದ್ದು, ಸಂತ್ರಸ್ತೆ ಯುವತಿ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ ಯುವತಿ ಬಸ್ತಿಪಡ್ಪು ತನ್ನ ನಿವಾಸದಿಂದ ಭಗವತಿ ದೇವಸ್ಥಾನ ದ ಒಳರಸ್ತೆಯಾಗಿ ನಡೆದು ಕೊಂಡು ಬರುತ್ತಿದ್ದಾಗ ಕಬ್ಬೀಣದ ಕಪಾಟು ತಯಾರು ಮಾಡುವ ಅಂಗಡಿ ಬಳಿ ನಿಂತಿದ್ದ ಅಪರಿಚಿತ ವ್ಯಕ್ತಿ ಈಕೆ ಬಳಿ ಬೈಕ್ ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆ ಯುವತಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.