News Karnataka Kannada
Friday, April 26 2024
ಮಂಗಳೂರು

ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ: ವಿಡಿಯೋ ವೈರಲ್

Video of bjp workers assaulting him goes viral
Photo Credit : News Kannada

ಮೂಡುಬಿದಿರೆ: ಬಿಜೆಪಿಯ ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಸಂಜೆ ತೆಂಕಮಿಜಾರು ಬಳಿ ಬಿಜೆಪಿಯ ವಿಜಯೋತ್ಸವದ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶಶಿಕಾಂತ ಶೆಟ್ಟಿಗಾರ್ ಅದೇ ದಾರಿಯಲ್ಲಿ ಬರುತ್ತಿದ್ದಾಗ ಅವರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು ಅವರು ತಪ್ಪಿಸಿಕೊಂಡು ತಮ್ಮ ಅಂಗಡಿಯೊಳಗೆ ಹೋಗಲೆತ್ನಿಸಿದ್ದರೂ ಅಲ್ಲಿಗೆ ಹೋಗಿ ಮೊಬೈಲ್ ಕಿತ್ತುಕೊಂಡಿದ್ದಾರೆ. ಹಲ್ಲೆ ನಡೆಸುವ ದೃಶ್ಯದ ವೀಡಿಯೋ ವೈರಲ್ ಆಗಿದೆ.

ಹಲ್ಲೆಗೊಳಗಾದ ಶಶಿಕಾಂತ ಶೆಟ್ಟಿಗಾರ್ ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಸಚಿವ ಕೆ. ಅಭಯಚಂದ್ರ ಸಹಿತ ಹಲವಾರು ಕಾಂಗ್ರೆಸ್ ಕಾರ್ಯ ಕರ್ತರು ಆಸ್ಪತ್ರೆಗೆ ಧಾವಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ.

ದಯಾನಂದ ಪೂಜಾರಿ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಮ್ ಸಹಿತ ಹಲವಾರು ಮಂದಿ ಆಸ್ಪತ್ರೆಗೆ ಧಾವಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು