News Kannada
Sunday, October 01 2023
ಸಮುದಾಯ

ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ

Vishwa Hindu Parishad demands adequate protection for Kadri Sri Manjunatheshwara Temple
Photo Credit : Twitter

ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.

ದೇವಸ್ಥಾನದ ಒಳಕ್ಕೆ ಅನ್ಯಕೋಮಿನ ವ್ಯಕ್ತಿಗಳು ನುಗ್ಗಿದ್ದು ಇದೀಗ ತನಿಖೆ ನಡೆಯುತ್ತಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಲಾಗಿತ್ತು.

ಈ ಹಿಂದೆ ಉಗ್ರ ಶಾರಿಖ್ ಕುಕ್ಕರ್ ಬಾಂಬ್ ಮೂಲಕ ದೇವಸ್ಥಾನ ಗುರಿಯಾಗಿಟ್ಟುಕೊಂಡಿದ್ದು ದೊಡ್ಡ ವಿವಾದವಾಗಿತ್ತು. ಇದೀಗ ಈ ಯುವಕರು ಕೂಡ ಅಂತಹ ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ನಡೆಸಬೇಕು , ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರಿಗೆ ಮನವಿ ನೀಡಿದ್ದು, ಕದ್ರಿ ದೇವಸ್ಥಾನಕ್ಕೆ ಶಾಶ್ವತ ಪೋಲಿಸ್ ಸಿಬ್ಬಂದಿ ನೀಡಿ ಸೂಕ್ತ ಭದ್ರತೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿಯಲ್ಲಿ ಆಗ್ರಹಿಸಲಾಗಿದೆ.

See also  ಚಿನ್ನ ಪ್ರಿಯರಿಗೆ ಬಂಪರ್: ಸತತ ಮೂರನೇ ದಿನವೂ ಹಳದಿ ಲೋಹದ ಬೆಲೆ ಕುಸಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು