ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮೂಡುಶೆಡ್ಡೆ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಭಾರತ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ-೨೦೨೩ “ಮತದಾರರ ಜಾಗೃತಿ ಅಭಿಯಾನ” ನಡೆಯಿತು.
ಪಂಚಾಯತಿ ಎದುರು I vote fore sure ಬರೆದು ಮತದಾನದ ಪ್ರತಿಜ್ಞೆ ಬೋಧಿಸಲಾಯಿತು. ಬಳಿಕ ಮೂಡುಶೆಡ್ಡೆ ಗ್ರಾಮ ಪಂಚಾಯತ್ನಿಂದ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಜಾಥಾವು ಬೆಸೆಂಟ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ನೆರವಿನಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ತಾ.ಪಂ. ಸಹಾಯಕ ನಿರ್ದೇಶಕ(ಗ್ರಾ.ಉ) ಅಬೂಬಕ್ಕರ್ ಅವರು ಬಲೂನು ಹಾರಿಸುವುದರ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮತದಾನ ಮಾಡುವುದು ನಮ್ಮ ಹಕ್ಕು, ಒಂದು ಮತದಿಂದ ಯಾವುದೇ ವ್ಯತ್ಯಾಸವಾಗದು ಎಂದು ಮತದಾನ ಮಾಡದಿದ್ದರೆ, ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅವಕಾಶವನ್ನು ನಾವು ಕಳೆದು ಕೊಂಡಂತಾಗುತ್ತದೆ. ಆದ್ದರಿಂದ ಮೇ ೧೦ರಂದು ಮತದಾನ ಮಾಡಿ ಎಂದರು.
ಸ್ವೀಪ್ ಸಮಿತಿ ಸದಸ್ಯ ಡೊಂಬಯ್ಯ ಇಡ್ಕಿದು ಮಾತನಾಡಿ ಮತದಾನದ ಮಹತ್ವ ವಿವರಿಸಿದರು. ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ತಾ.ಪಂ. ವ್ಯವಸ್ಥಾಪಕರಾದ ಸುವರ್ಣ, ಸ್ವೀಪ್ ಸಮಿತಿ ಸದಸ್ಯರು, ಶಿಕ್ಷಕರು, ಸ್ವಸಹಾಯ ಸಂಘದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.