News Karnataka Kannada
Friday, April 19 2024
Cricket
ಮಂಗಳೂರು

ಸ್ವೀಪ್ ಸಮಿತಿ ಮತ್ತು ಮೂಡುಶೆಡ್ಡೆ ಗ್ರಾ.ಪಂ ಸಹಯೋಗದಲ್ಲಿ “ಮತದಾರರ ಜಾಗೃತಿ ಅಭಿಯಾನ”

"Voters' Awareness Campaign" in association with SVEEP Samiti and Moodushedde Gram Panchayat
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮೂಡುಶೆಡ್ಡೆ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಭಾರತ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ-೨೦೨೩ “ಮತದಾರರ ಜಾಗೃತಿ ಅಭಿಯಾನ” ನಡೆಯಿತು.

ಪಂಚಾಯತಿ ಎದುರು I vote fore sure ಬರೆದು ಮತದಾನದ ಪ್ರತಿಜ್ಞೆ ಬೋಧಿಸಲಾಯಿತು. ಬಳಿಕ ಮೂಡುಶೆಡ್ಡೆ ಗ್ರಾಮ ಪಂಚಾಯತ್‌ನಿಂದ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಜಾಥಾವು ಬೆಸೆಂಟ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ನೆರವಿನಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ತಾ.ಪಂ. ಸಹಾಯಕ ನಿರ್ದೇಶಕ(ಗ್ರಾ.ಉ) ಅಬೂಬಕ್ಕರ್ ಅವರು ಬಲೂನು ಹಾರಿಸುವುದರ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮತದಾನ ಮಾಡುವುದು ನಮ್ಮ ಹಕ್ಕು, ಒಂದು ಮತದಿಂದ ಯಾವುದೇ ವ್ಯತ್ಯಾಸವಾಗದು ಎಂದು ಮತದಾನ ಮಾಡದಿದ್ದರೆ, ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅವಕಾಶವನ್ನು ನಾವು ಕಳೆದು ಕೊಂಡಂತಾಗುತ್ತದೆ. ಆದ್ದರಿಂದ ಮೇ ೧೦ರಂದು ಮತದಾನ ಮಾಡಿ ಎಂದರು.

ಸ್ವೀಪ್ ಸಮಿತಿ ಸದಸ್ಯ ಡೊಂಬಯ್ಯ ಇಡ್ಕಿದು ಮಾತನಾಡಿ ಮತದಾನದ ಮಹತ್ವ ವಿವರಿಸಿದರು. ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ತಾ.ಪಂ. ವ್ಯವಸ್ಥಾಪಕರಾದ ಸುವರ್ಣ, ಸ್ವೀಪ್ ಸಮಿತಿ ಸದಸ್ಯರು, ಶಿಕ್ಷಕರು, ಸ್ವಸಹಾಯ ಸಂಘದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು