News Karnataka Kannada
Friday, March 29 2024
Cricket
ಮಂಗಳೂರು

ಮಂಗಳೂರು ನಗರದಲ್ಲಿ ನೀರು ರೇಷನಿಂಗ್‌ ಜಾರಿ

Water rationing in Mangalore city from tomorrow (May 4).
Photo Credit : News Kannada

ಮಂಗಳೂರು: ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿರುವ ಕಾರಣದಿಂದಾಗಿ ನಾಳೆ (ಮೇ 4) ರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ರೇಷನಿಂಗ್‌ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತದೆ.

ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್‌ (ಮಂಗಳೂರು ಉತ್ತರ) ಭಾಗಕ್ಕೆ ʻಪರ್ಯಾಯ ದಿನʼಗಳಲ್ಲಿ ನೀರು ಬಿಡಲು ಸೂಚಿಸಲಾಗಿದೆ.

ಅದಲ್ಲದೆ, ಕಟ್ಟಡ ರಚನೆ, ಇತರೆ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವೀಸ್‌ ಸ್ಟೇಷನ್‌ ಗಳಿಗೆ ನೀರು ಬಳಕೆಗೆ ಅವಕಾಶವಿಲ್ಲ.  ಮಹಾನಗರದ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ನೀರನ್ನು ವಿನಾ ಕಾರಣ ಪೋಲು ಮಾಡುತ್ತಿರುವುದು ಕಂಟಡುಬಂದಲ್ಲಿ ಯಾವುದೇ ಸೂಚನೆ ನೀಡದೆ ನೀರು ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಮೇ 5  ರಂದು ಮಂಗಳೂರು ನಗರ ಉತ್ತರಕ್ಕೆ, ಮೇ 6 ರಂದು ಮಂಗಳೂರು ನಗರ ದಕ್ಷಿಣ ಹೀಗೆ ಕ್ರಮಾನುಗತವಾಗಿ ಈ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು