News Karnataka Kannada
Tuesday, April 23 2024
Cricket
ಮಂಗಳೂರು

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

World Environment Day celebrated at Kalladka Sri Rama Higher Primary School
Photo Credit : News Kannada

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಪರಿಸರ ದಿನವನ್ನು ಸೋಮವಾರ ಆಚರಿಸಲಾಯಿತು.

ಪರಿಸರದ ಮಹತ್ವ ಕುರಿತು ಮಾತನಾಡಿದ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ಬಾಲಕೃಷ್ಣ ಅವರು, “ಪರಿಸರದೊಂದಿಗೆ ಪ್ರತಿಯೊಂದು ಜೀವಿಗೂ ಭಾವನಾತ್ಮಕ ಸಂಬಂಧವಿದೆ, ಪೂರ್ವಜರು ಪರಿಸರವನ್ನು ಪ್ರೀತಿಸುವುದರ ಜೊತೆಗೆ ಈ ಬಗ್ಗೆ ಪೂಜನೀಯ ಭಾವನೆಯನ್ನು ಹೊಂದಿದ್ದರು. ಈ ರೀತಿಯಾಗಿ ಪರಿಸರ ಉಳಿಸುತ್ತಿದ್ದರು. ಆದರೆ ನಾವಿಂದು ಪರಿಸರದ ಮಹತ್ವವನ್ನು ಮರೆಯುತ್ತಿದ್ದೇವೆ, ಮಳೆಗಾಲದೊಂದಿಗೆ ಆಚರಿಸಬೇಕಾಗಿದ್ದ ಈ ವಿಶ್ವ ಪರಿಸರ ದಿನವನ್ನು ನಾವು ಇಂದು ಮಳೆಯ ಕೊರತೆ, ನೀರಿನ ಅಭಾವ, ಬಿಸಿಯಾದ ವಾತಾವರಣ, ಅತಿಯಾದ ಬಾಯಾರಿಕೆಯಿಂದ ಆಚರಿಸುತ್ತಿರುವುದು ವಿಪರ‍್ಯಾಸವೆಂದೆನಿಸುತ್ತಿದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು, ಅಧ್ಯಾಪಕರಾದ ಅನ್ನಪೂರ್ಣ ಎನ್ ಭಟ್ ಹಾಗೂ ರೂಪಕಲಾ ಎಂ ಉಪಸ್ಥಿತರಿದ್ದರು.

೭ನೇ ತರಗತಿಯ ವಿದ್ಯಾರ್ಥಿ ಆದಿತ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು