ಮಂಗಳೂರು: ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಂಗಳೂರು ಹೊಸೂರು ರಸ್ತೆ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಅಗಲಗುರ್ಕಿ ಬಿಜಿಎಸ್ ಶಾಲೆಯ ಯಶಸ್ ಗೌಡ, ವಿಜಯಪುರ ಜಿಲ್ಲೆಯ ಸವದತ್ತಿ ಶ್ರೀ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ಭೀಮನಗೌಡ ಪಾಟೀಲ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರತಿ ಸಲ ಫಲಿತಾಂಶದಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ 19ನೇ ಸ್ಥಾನ ಹಾಗೂ ಉಡುಪಿ 18ನೇ ಸ್ಥಾನವನ್ನು ಪಡೆದುಕೊಂಡಿದೆ.